<p><strong>ಬೆಂಗಳೂರು:</strong>ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಕಾಮಿಡಿ ಕಿಲಾಡಿಗಳು ಸೀಸನ್ 2 ರಿಯಾಲಿಟಿ ಶೋನ ವಿಜೇತರಾಗಿ ಹಾಸನದ ಮಡೆನೂರು ಮನು ಹೊರಹೊಮ್ಮಿದ್ದು, ₹ 5 ಲಕ್ಷ ಚೆಕ್ ಮತ್ತು ಟ್ರೋಫಿ ನೀಡಲಾಯಿತು.</p>.<p>ರಾಮದುರ್ಗದ ಅಪ್ಪಣ್ಣ ಮತ್ತು ಮಂಗಳೂರಿನ ಸೂರಜ್ ಜಂಟಿಯಾಗಿ ದ್ವಿತೀಯ ಸ್ಥಾನ ಪಡೆದರು. ಇಬ್ಬರಿಗೂ ತಲಾ ಎರಡು ಲಕ್ಷ ಬಹುಮಾನ ಮತ್ತು ಟ್ರೋಫಿ ವಿತರಿಸಲಾಯಿತು. ಮೂರನೇ ಸ್ಥಾನ ಪಡೆದ ಕುಂದಾಪುರದ ಸೂರ್ಯ ಅವರಿಗೆ ₹ 1 ಲಕ್ಷ ಬಹುಮಾನ ಮತ್ತು ಟ್ರೋಫಿ ನೀಡಲಾಯಿತು.</p>.<p>ವಿಜಯಪುರದಲ್ಲಿ ನಡೆದ ಫೈನಲ್ ಸ್ಪರ್ಧೆಗೆ ಸಾವಿರಾರು ಮಂದಿ ಸಾಕ್ಷಿಯಾದರು. ತೀರ್ಪುಗಾರರ ಅಂಕಗಳು ಮತ್ತು ವೀಕ್ಷಕರ ಎಸ್.ಎಂ.ಎಸ್ ಆಧರಿಸಿ ವಿಜೇತರನ್ನು ಆಯ್ಕೆ ಮಾಡಲಾಯಿತು.</p>.<p>ಜುಲೈ 7ರಿಂದ ಜೀ ಕನ್ನಡ ವಾಹಿನಿಯಲ್ಲಿ ಕಾಮಿಡಿ ಕಿಲಾಡಿಗಳು ಚಾಂಪಿಯನ್ಶಿಪ್ ನಡೆಯಲಿದೆ. ಇದರಲ್ಲಿಎರಡು ಸೀಸನ್ನ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಈ ರಿಯಾಲಿಟಿ ಶೋ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9ಗಂಟೆಗೆಪ್ರಸಾರವಾಗಲಿದೆ. ಚಂದನವನದ ಹಾಸ್ಯನಟರು ಜ್ಯೂರಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.</p>.<p><strong>ಸಂತಸ ತಂದಿದೆ:</strong></p>.<p>‘ದ್ವಿತೀಯ ಸ್ಥಾನ ಪಡೆಯುತ್ತೇನೆ ಎಂಬ ವಿಶ್ವಾಸವಿತ್ತು. ಮೊದಲ ಸ್ಥಾನ ಪಡೆದಿರುವುದಕ್ಕೆ ಖುಷಿಯಾಗಿದೆ. ನನ್ನ ಪ್ರತಿಭೆ ಹೊರಹೊಮ್ಮಲು ವೇದಿಕೆ ಕಲ್ಪಿಸಿದ ಜೀ ಕನ್ನಡ ವಾಹಿನಿ ಮತ್ತು ವೀಕ್ಷಕರಿಗೆ ಆಭಾರಿಯಾಗಿದ್ದೇನೆ’ ಎಂದು ಮಡೆನೂರು ಮನು ‘ಪ್ರಜಾವಾಣಿ’ಯೊಂದಿಗೆ ಸಂತಸ ಹಂಚಿಕೊಂಡರು.</p>.<p>‘ಸಿನಿಮಾದಲ್ಲಿ ನಟಿಸಬೇಕೆಂದು ಬೆಂಗಳೂರಿಗೆ ಬಂದೆ. ಬೇಕರಿ, ಆರ್ಕೆಸ್ಟ್ರಾಗಳಲ್ಲಿ ಕೆಲಸ ಮಾಡಿದೆ. ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನಿಂದ ಸಾಕಷ್ಟು ಕಲಿತಿದ್ದೇನೆ. ಇದು ನನ್ನ ಭವಿಷ್ಯದ ನಟನಾಬದುಕಿಗೆ ಸಹಕಾರಿಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಕಾಮಿಡಿ ಕಿಲಾಡಿಗಳು ಸೀಸನ್ 2 ರಿಯಾಲಿಟಿ ಶೋನ ವಿಜೇತರಾಗಿ ಹಾಸನದ ಮಡೆನೂರು ಮನು ಹೊರಹೊಮ್ಮಿದ್ದು, ₹ 5 ಲಕ್ಷ ಚೆಕ್ ಮತ್ತು ಟ್ರೋಫಿ ನೀಡಲಾಯಿತು.</p>.<p>ರಾಮದುರ್ಗದ ಅಪ್ಪಣ್ಣ ಮತ್ತು ಮಂಗಳೂರಿನ ಸೂರಜ್ ಜಂಟಿಯಾಗಿ ದ್ವಿತೀಯ ಸ್ಥಾನ ಪಡೆದರು. ಇಬ್ಬರಿಗೂ ತಲಾ ಎರಡು ಲಕ್ಷ ಬಹುಮಾನ ಮತ್ತು ಟ್ರೋಫಿ ವಿತರಿಸಲಾಯಿತು. ಮೂರನೇ ಸ್ಥಾನ ಪಡೆದ ಕುಂದಾಪುರದ ಸೂರ್ಯ ಅವರಿಗೆ ₹ 1 ಲಕ್ಷ ಬಹುಮಾನ ಮತ್ತು ಟ್ರೋಫಿ ನೀಡಲಾಯಿತು.</p>.<p>ವಿಜಯಪುರದಲ್ಲಿ ನಡೆದ ಫೈನಲ್ ಸ್ಪರ್ಧೆಗೆ ಸಾವಿರಾರು ಮಂದಿ ಸಾಕ್ಷಿಯಾದರು. ತೀರ್ಪುಗಾರರ ಅಂಕಗಳು ಮತ್ತು ವೀಕ್ಷಕರ ಎಸ್.ಎಂ.ಎಸ್ ಆಧರಿಸಿ ವಿಜೇತರನ್ನು ಆಯ್ಕೆ ಮಾಡಲಾಯಿತು.</p>.<p>ಜುಲೈ 7ರಿಂದ ಜೀ ಕನ್ನಡ ವಾಹಿನಿಯಲ್ಲಿ ಕಾಮಿಡಿ ಕಿಲಾಡಿಗಳು ಚಾಂಪಿಯನ್ಶಿಪ್ ನಡೆಯಲಿದೆ. ಇದರಲ್ಲಿಎರಡು ಸೀಸನ್ನ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಈ ರಿಯಾಲಿಟಿ ಶೋ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9ಗಂಟೆಗೆಪ್ರಸಾರವಾಗಲಿದೆ. ಚಂದನವನದ ಹಾಸ್ಯನಟರು ಜ್ಯೂರಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.</p>.<p><strong>ಸಂತಸ ತಂದಿದೆ:</strong></p>.<p>‘ದ್ವಿತೀಯ ಸ್ಥಾನ ಪಡೆಯುತ್ತೇನೆ ಎಂಬ ವಿಶ್ವಾಸವಿತ್ತು. ಮೊದಲ ಸ್ಥಾನ ಪಡೆದಿರುವುದಕ್ಕೆ ಖುಷಿಯಾಗಿದೆ. ನನ್ನ ಪ್ರತಿಭೆ ಹೊರಹೊಮ್ಮಲು ವೇದಿಕೆ ಕಲ್ಪಿಸಿದ ಜೀ ಕನ್ನಡ ವಾಹಿನಿ ಮತ್ತು ವೀಕ್ಷಕರಿಗೆ ಆಭಾರಿಯಾಗಿದ್ದೇನೆ’ ಎಂದು ಮಡೆನೂರು ಮನು ‘ಪ್ರಜಾವಾಣಿ’ಯೊಂದಿಗೆ ಸಂತಸ ಹಂಚಿಕೊಂಡರು.</p>.<p>‘ಸಿನಿಮಾದಲ್ಲಿ ನಟಿಸಬೇಕೆಂದು ಬೆಂಗಳೂರಿಗೆ ಬಂದೆ. ಬೇಕರಿ, ಆರ್ಕೆಸ್ಟ್ರಾಗಳಲ್ಲಿ ಕೆಲಸ ಮಾಡಿದೆ. ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನಿಂದ ಸಾಕಷ್ಟು ಕಲಿತಿದ್ದೇನೆ. ಇದು ನನ್ನ ಭವಿಷ್ಯದ ನಟನಾಬದುಕಿಗೆ ಸಹಕಾರಿಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>