ಈ ಧಾರಾವಾಹಿಗೆ ಆದರ್ಶ ಹೆಗ್ಡೆ ನಿರ್ದೇಶನವಿದೆ. ಛಾಯಾಗ್ರಾಹಕರಾಗಿ ರುದ್ರಮುನಿ ಬೆಳೆಗೆರೆ, ಸಹ-ಛಾಯಾಗ್ರಾಹಕ ಬಾಲಾಜಿ ರಾವ್ ಧಾರಾವಾಹಿಯನ್ನು ಸೆರೆ ಹಿಡಿಯುತ್ತಿದ್ದಾರೆ. ಶಾಕ್ ಸ್ಟುಡಿಯೋಸ್ ಮುಖ್ಯಸ್ಥ ಶಂಕರ್ ವೆಂಕಟರಮಣ್ ‘ಮದುಮಗಳ’ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಈ ಧಾರಾವಾಹಿ ಮಾರ್ಚ್ 7ರಿಂದ ಪ್ರತಿ ಸೋಮವಾರದಿಂದ ಶನಿವಾರದವರೆಗೆ ಸಂಜೆ 6ಕ್ಕೆ ಪ್ರಸಾರವಾಗಲಿದೆ.