ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯವಾಗಿದ್ದಾರೆ ರಾಮಾಯಣದ 'ರಾವಣ' ಅರವಿಂದ ತ್ರಿವೇದಿ

Last Updated 4 ಮೇ 2020, 8:45 IST
ಅಕ್ಷರ ಗಾತ್ರ

ಬೆಂಗಳೂರು: ಜನಪ್ರಿಯ ರಾಮಾಯಣ ಧಾರಾವಾಹಿಯ ರಾವಣ ಪಾತ್ರದಾರಿ ಅರವಿಂದ ತ್ರಿವೇದಿ ಆರೋಗ್ಯವಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ಖಚಿತಪಡಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ರಾವಣ ಪಾತ್ರದಾರಿ ಅರವಿಂದ ತ್ರಿವೇದಿನಿಧನರಾಗಿದ್ದಾರೆ ಎಂಬ ಸುಳ್ಳುಸುದ್ದಿಗಳು ಹರಿದಾಡಿದ್ದವು. ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿರುವ ಅರವಿಂದ ತ್ರಿವೇದಿ ಕುಟುಂಬದವರು, ಅವರು ಆರೋಗ್ಯವಾಗಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ದೂರದರ್ಶನದಲ್ಲಿ ರಾಮಾಯಣ ಧಾರಾವಾಹಿ ಮರು ಪ್ರಸಾರವಾದ ಬಳಿಕ ಅವರವಿಂದ್‌ ತ್ರಿವೇದಿ ಟ್ವಿಟರ್ ಖಾತೆ ತೆರೆದಿದ್ದಾರೆ. ಸುಳ್ಳು ಸುದ್ದಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು'ಯಾರೊಬ್ಬರ ಸಾವಿನ ಬಗ್ಗೆ ನಿಖರವಾಗಿ ಪರಿಶೀಲಿಸದೇ ಸುದ್ದಿ ಹರಡುವುದು ತಪ್ಪು. ಈ ಬಗ್ಗೆ ಕ್ಷಮೆಯಾಚಿಸಿ, ಆ ಟ್ವೀಟ್‌ ಅನ್ನು ಅಳಿಸಿ ಹಾಕಿ' ಎಂದು ಟ್ವೀಟ್‌ ಮಾಡಿದ್ದಾರೆ.

ಲಾಕ್‌ಡೌನ್‌ ಪರಿಣಾಮ ರಾಮಾಯಣ ಧಾರಾವಾಹಿಯನ್ನು ದೂರದರ್ಶನದಲ್ಲಿ ಮರು ಪ್ರಸಾರ ಮಾಡಲಾಗಿತ್ತು. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಸಾಕಷ್ಟು ಜನಪ್ರಿಯತೆ ಪಡೆದಿದೆ. ನೋಡುಗರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT