ಅರ್ಜಿದಾರರು ‘ಖಾಸಗಿತನದ ಹಕ್ಕು’ ಮತ್ತು ‘ಮರೆಯುವ ಹಕ್ಕು’ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಗೂಗಲ್ ಎಲ್ಎಲ್ಸಿ, ಭಾರತೀಯ ಪತ್ರಿಕಾ ಮಂಡಳಿ ಮತ್ತು ವಿದ್ಯುನ್ಮಾನ ಮಾಧ್ಯಮಗಳ ನಿಗಾ ಕೇಂದ್ರಕ್ಕೆ ನ್ಯಾಯಮೂರ್ತಿ ರೇಖಾ ಪಲ್ಲಿ ಅವರು ನೋಟಿಸ್ ನೀಡಿದ್ದಾರೆ.