<p><strong>ಬೆಂಗಳೂರು</strong>: ಕೋಣನಕುಂಟೆ ಬಳಿಯ ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಗುರುವಾರ ಅಪಘಾತ ಸಂಭವಿಸಿದ್ದು, ಆರು ವರ್ಷದ ಬಾಲಕಿ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕೆಯ ತಾಯಿ ಅಮೃತಾ ನಾಯ್ಡು ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.</p>.<p>‘ಸ್ಥಳೀಯ ನಿವಾಸಿ ಸಮನ್ವಿ ಹಾಗೂ ನಟಿಯಾದ ಅಮೃತಾ ನಾಯ್ಡು, ಕಲರ್ಸ್ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳಾಗಿದ್ದರು. ಕೆಲಸ ನಿಮಿತ್ತ ತಾಯಿ– ಮಗಳು ಸೇರಿ ಟಿವಿಎಸ್ ಸ್ಕೂಟಿಯಲ್ಲಿ ಹೊರಟಿದ್ದಾಗ ಲಾರಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ’ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ತಿಳಿಸಿದರು.</p>.<p>‘ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ಮಂಜೇಗೌಡ ಎಂಬಾತನನ್ನು ಬಂಧಿಸಲಾಗಿದೆ. ಸಮನ್ವಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಹೇಳಿದರು.</p>.<p class="Subhead"><strong>ಮೆಟ್ರೊ ನಿಲ್ದಾಣಕ್ಕೆ ಹೊರಟಿದ್ದರು</strong></p>.<p class="Subhead">‘ವಾಜರಹಳ್ಳಿ ನಿವಾಸಿ ಅಮೃತಾ ಹಾಗೂ ಮಗಳು ಸಮನ್ವಿ, ಸಮೀಪದಲ್ಲೇ ಇದ್ದ ಮೆಟ್ರೊ ನಿಲ್ದಾಣಕ್ಕೆ ಸ್ಕೂಟಿಯಲ್ಲಿ ಹೊರಟಿದ್ದರು. ಅದೇ ಸಂದರ್ಭದಲ್ಲಿ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಲಾರಿ, ಸ್ಕೂಟಿಗೆ ಗುದ್ದಿತ್ತು’ ಎಂದು ಪೊಲೀಸರು ತಿಳಿಸಿದರು.</p>.<p>‘ಸೊಂಟ ಹಾಗೂ ತೊಡೆಗೆ ತೀವ್ರ ಪೆಟ್ಟು ಬಿದ್ದು ಸಮನ್ವಿ ಮೃತಪಟ್ಟಿದ್ದಾರೆ. ಗಾಯಾಳು ಅಮೃತಾ ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಮೃತ ಸಮನ್ವಿ, ಹರಿಕಥಾ ಗಾಯಕ ಗುರುರಾಜ ನಾಯ್ಡು ಅವರ ಮೊಮ್ಮಗಳು’ ಎಂದೂ ವಿವರಿಸಿದರು.</p>.<p>ಈ ಹಿಂದೆಯೂಅಮೃತಾ ಅವರ ಮಗುವೊಂದು ಮೃತಪಟ್ಟಿತ್ತು.ಅವರೀಗ ಗರ್ಭಿಣಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋಣನಕುಂಟೆ ಬಳಿಯ ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಗುರುವಾರ ಅಪಘಾತ ಸಂಭವಿಸಿದ್ದು, ಆರು ವರ್ಷದ ಬಾಲಕಿ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕೆಯ ತಾಯಿ ಅಮೃತಾ ನಾಯ್ಡು ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.</p>.<p>‘ಸ್ಥಳೀಯ ನಿವಾಸಿ ಸಮನ್ವಿ ಹಾಗೂ ನಟಿಯಾದ ಅಮೃತಾ ನಾಯ್ಡು, ಕಲರ್ಸ್ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳಾಗಿದ್ದರು. ಕೆಲಸ ನಿಮಿತ್ತ ತಾಯಿ– ಮಗಳು ಸೇರಿ ಟಿವಿಎಸ್ ಸ್ಕೂಟಿಯಲ್ಲಿ ಹೊರಟಿದ್ದಾಗ ಲಾರಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ’ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ತಿಳಿಸಿದರು.</p>.<p>‘ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ಮಂಜೇಗೌಡ ಎಂಬಾತನನ್ನು ಬಂಧಿಸಲಾಗಿದೆ. ಸಮನ್ವಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಹೇಳಿದರು.</p>.<p class="Subhead"><strong>ಮೆಟ್ರೊ ನಿಲ್ದಾಣಕ್ಕೆ ಹೊರಟಿದ್ದರು</strong></p>.<p class="Subhead">‘ವಾಜರಹಳ್ಳಿ ನಿವಾಸಿ ಅಮೃತಾ ಹಾಗೂ ಮಗಳು ಸಮನ್ವಿ, ಸಮೀಪದಲ್ಲೇ ಇದ್ದ ಮೆಟ್ರೊ ನಿಲ್ದಾಣಕ್ಕೆ ಸ್ಕೂಟಿಯಲ್ಲಿ ಹೊರಟಿದ್ದರು. ಅದೇ ಸಂದರ್ಭದಲ್ಲಿ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಲಾರಿ, ಸ್ಕೂಟಿಗೆ ಗುದ್ದಿತ್ತು’ ಎಂದು ಪೊಲೀಸರು ತಿಳಿಸಿದರು.</p>.<p>‘ಸೊಂಟ ಹಾಗೂ ತೊಡೆಗೆ ತೀವ್ರ ಪೆಟ್ಟು ಬಿದ್ದು ಸಮನ್ವಿ ಮೃತಪಟ್ಟಿದ್ದಾರೆ. ಗಾಯಾಳು ಅಮೃತಾ ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಮೃತ ಸಮನ್ವಿ, ಹರಿಕಥಾ ಗಾಯಕ ಗುರುರಾಜ ನಾಯ್ಡು ಅವರ ಮೊಮ್ಮಗಳು’ ಎಂದೂ ವಿವರಿಸಿದರು.</p>.<p>ಈ ಹಿಂದೆಯೂಅಮೃತಾ ಅವರ ಮಗುವೊಂದು ಮೃತಪಟ್ಟಿತ್ತು.ಅವರೀಗ ಗರ್ಭಿಣಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>