<p>ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಿಂದ ಮಾಯಾ ಪಾತ್ರದಲ್ಲಿ ನಟಿಸುತ್ತಿದ್ದ ರುಹಾನಿ ಶೆಟ್ಟಿ ಹೊರ ಬಂದಿದ್ದಾರೆ. ನಾ ನಿನ್ನ ಬಿಡಲಾರೆ ಧಾರಾವಾಹಿ ಸಂಚಿಕೆಗಳು ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಮುನ್ನುಗ್ಗುತ್ತಿತ್ತು. </p><p>ಆದರೆ, ಈಗ ದಿಢೀರನೇ ಧಾರಾವಾಹಿಯಿಂದ ಮಾಯಾ ಪಾತ್ರಧಾರಿ ರುಹಾನಿ ಶೆಟ್ಟಿ ಆಚೆ ಬಂದಿದ್ದು, ಆ ಪಾತ್ರಕ್ಕೆ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಖ್ಯಾತಿಯ ಕೋಳಿ ರಮ್ಯಾ ಬಂದಿದ್ದಾರೆ. ಇನ್ನು, ನಟಿ ರುಹಾನಿ ಶೆಟ್ಟಿ ಧಾರಾವಾಹಿಯಿಂದ ಆಚೆ ಬರುತ್ತಿದ್ದಂತೆ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ಗಳ ಮೂಲಕ ಬೇಸರ ಹೊರ ಹಾಕುತ್ತಿದ್ದಾರೆ.</p>.<p>ಹೀಗಾಗಿ ನಟಿ ರುಹಾನಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ, ‘ಪ್ರತಿಯೊಬ್ಬರ ಕಾಮೆಂಟ್ ಮತ್ತು ಸಂದೇಶಗಳನ್ನು ನೋಡುತ್ತಿದ್ದೇನೆ. ನೀವು ನನ್ನ ಮೇಲೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕೆ ಎಂದೆಂದಿಗೂ ಧನ್ಯವಾದಗಳು. ಅಬ್ಬರದೊಂದಿಗೆ ಮತ್ತೆ ಪರದೆಯ ಮೇಲೆ ಬರುತ್ತೇನೆ. ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.</p><p>ಇತ್ತೀಚಿನ ಸಂಚಿಕೆಯಲ್ಲಿ ಮಾಯಾ, ಶರತ್ ಜೊತೆಗೆ ಮದುವೆ ಆಗಲೇಬೇಕೆಂದು ಪಣ ತೊಟ್ಟಿದ್ದಳು. ಆದರೆ ಕೊನೆಯ ಕ್ಷಣದಲ್ಲಿ ಧಾರಾವಾಹಿ ದೊಡ್ಡ ತಿರುವು ಪಡೆದುಕೊಂಡಿತ್ತು. ಮಾಯಾಗೆ ಕಟ್ಟಬೇಕಿದ್ದ ತಾಳಿಯನ್ನು ಶರತ್ ದುರ್ಗಾಗೆ ಕಟ್ಟಿಬಿಡುತ್ತಾನೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಿಂದ ಮಾಯಾ ಪಾತ್ರದಲ್ಲಿ ನಟಿಸುತ್ತಿದ್ದ ರುಹಾನಿ ಶೆಟ್ಟಿ ಹೊರ ಬಂದಿದ್ದಾರೆ. ನಾ ನಿನ್ನ ಬಿಡಲಾರೆ ಧಾರಾವಾಹಿ ಸಂಚಿಕೆಗಳು ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಮುನ್ನುಗ್ಗುತ್ತಿತ್ತು. </p><p>ಆದರೆ, ಈಗ ದಿಢೀರನೇ ಧಾರಾವಾಹಿಯಿಂದ ಮಾಯಾ ಪಾತ್ರಧಾರಿ ರುಹಾನಿ ಶೆಟ್ಟಿ ಆಚೆ ಬಂದಿದ್ದು, ಆ ಪಾತ್ರಕ್ಕೆ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಖ್ಯಾತಿಯ ಕೋಳಿ ರಮ್ಯಾ ಬಂದಿದ್ದಾರೆ. ಇನ್ನು, ನಟಿ ರುಹಾನಿ ಶೆಟ್ಟಿ ಧಾರಾವಾಹಿಯಿಂದ ಆಚೆ ಬರುತ್ತಿದ್ದಂತೆ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ಗಳ ಮೂಲಕ ಬೇಸರ ಹೊರ ಹಾಕುತ್ತಿದ್ದಾರೆ.</p>.<p>ಹೀಗಾಗಿ ನಟಿ ರುಹಾನಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ, ‘ಪ್ರತಿಯೊಬ್ಬರ ಕಾಮೆಂಟ್ ಮತ್ತು ಸಂದೇಶಗಳನ್ನು ನೋಡುತ್ತಿದ್ದೇನೆ. ನೀವು ನನ್ನ ಮೇಲೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕೆ ಎಂದೆಂದಿಗೂ ಧನ್ಯವಾದಗಳು. ಅಬ್ಬರದೊಂದಿಗೆ ಮತ್ತೆ ಪರದೆಯ ಮೇಲೆ ಬರುತ್ತೇನೆ. ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.</p><p>ಇತ್ತೀಚಿನ ಸಂಚಿಕೆಯಲ್ಲಿ ಮಾಯಾ, ಶರತ್ ಜೊತೆಗೆ ಮದುವೆ ಆಗಲೇಬೇಕೆಂದು ಪಣ ತೊಟ್ಟಿದ್ದಳು. ಆದರೆ ಕೊನೆಯ ಕ್ಷಣದಲ್ಲಿ ಧಾರಾವಾಹಿ ದೊಡ್ಡ ತಿರುವು ಪಡೆದುಕೊಂಡಿತ್ತು. ಮಾಯಾಗೆ ಕಟ್ಟಬೇಕಿದ್ದ ತಾಳಿಯನ್ನು ಶರತ್ ದುರ್ಗಾಗೆ ಕಟ್ಟಿಬಿಡುತ್ತಾನೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>