ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇವರು ಇದ್ದಾನೋ ಇಲ್ಲವೋ’: ಸಮನ್ವಿ ಸಾವಿನ ಕುರಿತು ಸೃಜನ್ ಲೋಕೇಶ್ ನುಡಿ ನಮನ

Last Updated 14 ಜನವರಿ 2022, 10:12 IST
ಅಕ್ಷರ ಗಾತ್ರ

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್‌ ಸ್ಟಾರ್’ ರಿಯಾಲಿಟಿ ಶೋನ ಸ್ಪರ್ಧಿ ಸಮನ್ವಿ ನಿಧನದಿಂದ ಕನ್ನಡ ಕಿರುತೆರೆ ಲೋಕದಲ್ಲಿ ಸೂತಕದ ಛಾಯೆ ಆವರಿಸಿದೆ.

ನಟ ಸೃಜನ್ ಲೋಕೇಶ್ ಮತ್ತು ಸಮನ್ವಿ ಅವರ ನಡುವೆ ಒಳ್ಳೆಯ ಬಾಂಧವ್ಯವಿತ್ತು. ಈ ಬಗ್ಗೆ ಸೃಜನ್ ತಮ್ಮ ಬರಹದ ಮೂಲಕ ವಿವರಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ದೇವರು ನಿಜವಾಗಿಯೂ ದೇವರಾ? ಅಥವಾ ದೇವರು ಇದ್ದಾನಾ? ಇಲ್ಲ, ದೇವರನ್ನ ನಂಬಲೇಬೇಕಾ? ಈ ಪ್ರಶ್ನೆಗಳು ಆಗಾಗ ಮೂಡಿ ಬರುತ್ತಿವೆ. ಈ ಘಟನೆಯ ನಂತರ ನಿಜವಾಗಲೂ ದೇವರು ಇದ್ದಾನೋ ಇಲ್ಲವೋ ಅನ್ನೋ ಪ್ರಶ್ನೆ ಮನಸ್ಸಿಗೆ ತುಂಬಾ ಗಾಢವಾಗಿ ಕಾಡುತ್ತಿದೆ. ಪುಟ್ಟ ಕಂದ ಸಮನ್ವಿ ಮಿಸ್ ಯೂ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಹೇಳಿದ್ದಾರೆ.

ಪಟಪಟನೆ ಮಾತನಾಡುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಪುಟಾಣಿ ಇನ್ನಿಲ್ಲ ಎಂಬ ಸುದ್ದಿಯನ್ನು ಅರಗಿಸಿಕೊಳ್ಳಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಗುರುವಾರ ಬೆಂಗಳೂರಿನ ಕೋಣನಕುಂಟೆ ಬಳಿಯ ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಮನ್ವಿ ನಿಧನರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯ ತಾಯಿ ಅಮೃತಾ ನಾಯ್ಡು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT