ಅನಾರೋಗ್ಯದಿಂದ ಬಳಲುತ್ತಿದ್ದ ನಟ ಸುದೀಪ್, ಕಳೆದೆರಡು ವಾರದ ಬಿಗ್ಬಾಸ್ ‘ವಾರದ ಕಥೆ ಕಿಚ್ಚನ ಜೊತೆ’ ಹಾಗೂ ‘ಸೂಪರ್ ಸಂಡೇ ವಿದ್ ಸುದೀಪ್’ನಲ್ಲಿ ಭಾಗವಹಿಸಿರಲಿಲ್ಲ. ಸುದೀಪ್ ಅನುಪಸ್ಥಿತಿಯಲ್ಲಿ ನಡೆದ ಸಂಚಿಕೆಯಲ್ಲಿ, ಮನೆಯಿಂದ ಹೊರಹೋಗಲು ನಾಮಿನೇಟ್ ಆಗಿದ್ದ ಸ್ಪರ್ಧಿಗಳನ್ನು ಹಲವು ಆಟದ ಮುಖಾಂತರ ಸೇಫ್ ಮಾಡಲಾಗಿತ್ತು. ಕಳೆದ ಎಂಟು ಆವೃತ್ತಿಗಳಲ್ಲಿ ಹೀಗಾಗಿದ್ದು ಇದೇ ಮೊದಲಾಗಿತ್ತು. ಮನೆಯೊಳಗಿದ್ದ ಸ್ಪರ್ಧಿಗಳೂ, ಸುದೀಪ್ ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪತ್ರದ ಮುಖೇನ ಕೋರಿದ್ದರು. ಸುದೀಪ್ ಅಭಿಮಾನಿಗಳೂ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಟ್ವಿಟರ್, ಇನ್ಸ್ಟಾಗ್ರಾಂನಲ್ಲಿ ಸಂದೇಶಗಳನ್ನು ಕಳುಹಿಸಿದ್ದರು.