<p><strong>ಬೆಂಗಳೂರು</strong>: ನಟ ದಿವಂಗತ ಪುನೀತ್ ರಾಜ್ಕುಮಾರ್ ಬೆಳ್ಳಿತೆರೆಯಲ್ಲಷ್ಟೇ ಅಲ್ಲದೇ ಕಿರುತೆರೆಯಲ್ಲೂ ಮಿಂಚಿದ್ದವರು. ‘ಕನ್ನಡದ ಕೋಟ್ಯಾಧಿಪತಿ’ ‘ಫ್ಯಾಮಿಲಿ ಪವರ್’ ಕಾರ್ಯಕ್ರಮಗಳ ಮುಖಾಂತರ ತಮ್ಮ ಛಾಪು ಮೂಡಿಸಿದ್ದರು. ‘ಪುನೀತ ನಮನ’ ಕಾರ್ಯಕ್ರಮದ ಬಳಿಕ ಇದೀಗ ಪುನೀತ್ ಅವರ ನೆನಪಿನಲ್ಲಿ ಮತ್ತೊಂದು ಕಾರ್ಯಕ್ರಮವನ್ನು ಕಿರುತೆರೆ ಕಲಾವಿದರು ಆಯೋಜಿಸುತ್ತಿದ್ದಾರೆ.</p>.<p>ಪುನೀತ ನಮನ ಕಾರ್ಯಕ್ರಮದಲ್ಲಿ ಚಂದನವನದ ಖ್ಯಾತ ಕಲಾವಿದರು ಸೇರಿದಂತೆ ತೆಲುಗು, ತಮಿಳು ಚಿತ್ರರಂಗದ ಕಲಾವಿದರೂ ಅಪ್ಪು ಅವರನ್ನು ನೆನೆದು ಶ್ರದ್ಧಾಂಜಲಿ ಸಲ್ಲಿಸಿದ್ದರು. ನ.28ರಂದು ಸಂಜೆ 4 ಗಂಟೆಗೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ‘ಅಪ್ಪು ಅಮರ’ ಕಾರ್ಯಕ್ರಮ ಆಯೋಜಿಸಲಿದ್ದು, ಜಯನಗರದ ನ್ಯಾಷನಲ್ ಕಾಲೇಜಿನ ಎಚ್.ಎನ್. ಕಲಾಕ್ಷೇತ್ರದಲ್ಲಿ ಇದು ನಡೆಯಲಿದೆ.</p>.<p>ಕಾರ್ಯಕ್ರಮಕ್ಕೆ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಕುಟುಂಬದ ಸದಸ್ಯರನ್ನು ಸಂಘದ ಅಧ್ಯಕ್ಷರಾದ ಎಸ್.ವಿ. ಶಿವಕುಮಾರ್ ಅವರ ನೇತೃತ್ವದ ನಿಯೋಗ ಇತ್ತೀಚೆಗೆ ಆಹ್ವಾನಿಸಿತು. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಸಂಘವು ತಿಳಿಸಿದೆ.</p>.<p><a href="https://www.prajavani.net/video/entertainment/cinema/memories-of-kannada-film-actor-puneeth-rajkumar-appu-dr-rajkumar-shiva-rajkumar-886262.html" target="_blank">ನೋಡಿ | ಮುತ್ತುರಾಜನ ಮಗ ಅಪ್ಪು ರಾಜಕುಮಾರ: ಇಲ್ಲಿದೆ ಪುನೀತ್ ಕುರಿತು ಗೊತ್ತಿಲ್ಲದ ಸತ್ಯಗಳು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಟ ದಿವಂಗತ ಪುನೀತ್ ರಾಜ್ಕುಮಾರ್ ಬೆಳ್ಳಿತೆರೆಯಲ್ಲಷ್ಟೇ ಅಲ್ಲದೇ ಕಿರುತೆರೆಯಲ್ಲೂ ಮಿಂಚಿದ್ದವರು. ‘ಕನ್ನಡದ ಕೋಟ್ಯಾಧಿಪತಿ’ ‘ಫ್ಯಾಮಿಲಿ ಪವರ್’ ಕಾರ್ಯಕ್ರಮಗಳ ಮುಖಾಂತರ ತಮ್ಮ ಛಾಪು ಮೂಡಿಸಿದ್ದರು. ‘ಪುನೀತ ನಮನ’ ಕಾರ್ಯಕ್ರಮದ ಬಳಿಕ ಇದೀಗ ಪುನೀತ್ ಅವರ ನೆನಪಿನಲ್ಲಿ ಮತ್ತೊಂದು ಕಾರ್ಯಕ್ರಮವನ್ನು ಕಿರುತೆರೆ ಕಲಾವಿದರು ಆಯೋಜಿಸುತ್ತಿದ್ದಾರೆ.</p>.<p>ಪುನೀತ ನಮನ ಕಾರ್ಯಕ್ರಮದಲ್ಲಿ ಚಂದನವನದ ಖ್ಯಾತ ಕಲಾವಿದರು ಸೇರಿದಂತೆ ತೆಲುಗು, ತಮಿಳು ಚಿತ್ರರಂಗದ ಕಲಾವಿದರೂ ಅಪ್ಪು ಅವರನ್ನು ನೆನೆದು ಶ್ರದ್ಧಾಂಜಲಿ ಸಲ್ಲಿಸಿದ್ದರು. ನ.28ರಂದು ಸಂಜೆ 4 ಗಂಟೆಗೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ‘ಅಪ್ಪು ಅಮರ’ ಕಾರ್ಯಕ್ರಮ ಆಯೋಜಿಸಲಿದ್ದು, ಜಯನಗರದ ನ್ಯಾಷನಲ್ ಕಾಲೇಜಿನ ಎಚ್.ಎನ್. ಕಲಾಕ್ಷೇತ್ರದಲ್ಲಿ ಇದು ನಡೆಯಲಿದೆ.</p>.<p>ಕಾರ್ಯಕ್ರಮಕ್ಕೆ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಕುಟುಂಬದ ಸದಸ್ಯರನ್ನು ಸಂಘದ ಅಧ್ಯಕ್ಷರಾದ ಎಸ್.ವಿ. ಶಿವಕುಮಾರ್ ಅವರ ನೇತೃತ್ವದ ನಿಯೋಗ ಇತ್ತೀಚೆಗೆ ಆಹ್ವಾನಿಸಿತು. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಸಂಘವು ತಿಳಿಸಿದೆ.</p>.<p><a href="https://www.prajavani.net/video/entertainment/cinema/memories-of-kannada-film-actor-puneeth-rajkumar-appu-dr-rajkumar-shiva-rajkumar-886262.html" target="_blank">ನೋಡಿ | ಮುತ್ತುರಾಜನ ಮಗ ಅಪ್ಪು ರಾಜಕುಮಾರ: ಇಲ್ಲಿದೆ ಪುನೀತ್ ಕುರಿತು ಗೊತ್ತಿಲ್ಲದ ಸತ್ಯಗಳು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>