<p id="thickbox_headline">ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ವೊಂದರಲ್ಲಿ ಕಿರುತೆರೆ ನಟಿ ಸೌಜನ್ಯಾ (ಸವಿ ಮಾದಪ್ಪ) (25) ನೇಣು ಬಿಗಿದುಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಸ್ಥಳದಲ್ಲಿ ಪೊಲೀಸರಿಗೆ ನಾಲ್ಕು ಪುಟಗಳ ಡೆಟ್ನೋಟ್ ದೊರೆತಿದೆ. ‘ನನ್ನ ಸಾವಿಗೆ ನಾನೇ ಕಾರಣ. ಇತ್ತೀಚೆಗೆ ನನ್ನ ಮಾನಸಿಕ ಆರೋಗ್ಯ ಸರಿಯಿಲ್ಲ. ಆರೋಗ್ಯ ಸಹ ಕೈ ಕೊಟ್ಟಿದೆ. ವೈಯಕ್ತಿಕ ಕಾರಣಗಳಿಗೆ ಮನನೊಂದು ಈ ನಿರ್ಧಾರಕ್ಕೆ ಬಂದಿದ್ದೇನೆ’ ಎಂದು ಮರಣ ಪತ್ರ ಬರೆದಿರುವ ಸೌಜನ್ಯಾ, ಇದಕ್ಕಾಗಿ ಹೆತ್ತವರ ಕ್ಷಮೆ ಕೇಳಿದ್ದಾರೆ.</p>.<p>ಇತ್ತೀಚೆಗೆ ಇನ್ಸ್ಟಾಗ್ರಾಂನಲ್ಲಿ ಪುಟ್ಟ ಬರಹವೊಂದನ್ನು ಪೋಸ್ಟ್ ಮಾಡಿದ್ದ ಸೌಜನ್ಯಾ,ನಿಮ್ಮ ಜೀವನದ ಬಗ್ಗೆ ಹಾಗೂ ಗುರಿ ಬಗ್ಗೆ ಹೆಚ್ಚು ಗಮನ ಕೇಂದ್ರೀಕರಿಸಿದರೆ ನೀವು ನಿಮ್ಮ ಜೀವನದಲ್ಲಿ ಸಾಕಷ್ಟು ಜನರನ್ನು ಕಳೆದುಕೊಳ್ಳಬೇಕಾಗುತ್ತದೆ’ ಎಂದು ಅವರು ಬರೆದುಕೊಂಡಿದ್ದರು.</p>.<p>‘ಯಾರನ್ನೂ ಕೀಳಾಗಿ ಕಾಣಬೇಡಿ. ನಗುತ್ತಾ ಇರುವ ವ್ಯಕ್ತಿಗಳ ಹಿಂದೆಯೂ ಸಾಕಷ್ಟು ನೋವಿರುತ್ತದೆ, ಆ ಬಗ್ಗೆ ಯಾರಿಗೂ ಗೊತ್ತಿರುವುದಿಲ್ಲ’ ಎಂದು ಅವರು ಇನ್ನೊಂದು ಪೋಸ್ಟ್ನಲ್ಲಿ ಬರೆದಿದ್ದರು. ‘happiness, sadness ’ ಹ್ಯಾಶ್ ಟ್ಯಾಗ್ ಹಾಕಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ, ಗೆಳೆಯರು ಹಾಗೂ ಸಹೋದರರ ಫೋಟೋ ಹಾಕಿ ಅವರಿಗೆ ಧನ್ಯವಾದ ಹೇಳಿದ್ದರು. ಇದಾದ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>‘ಈ ಯುವತಿ ಕಳೆದ ಒಂದೂವರೆ ವರ್ಷದಿಂದ ಅಪಾರ್ಟ್ಮೆಂಟ್ನಲ್ಲಿ ಒಬ್ಬರೇ ವಾಸವಿದ್ದರು. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡುಬಂದಿದ್ದು, ನಾನಾ ಆಯಾಮಗಳ ಕುರಿತು ತನಿಖೆ ನಡೆಸುತ್ತಿದ್ದೇವೆ’ ರಾಮನಗರ ಎಸ್ಪಿ ಗಿರೀಶ್ ತಿಳಿಸಿದರು.</p>.<p>ಕೊಡಗು ಜಿಲ್ಲೆಯ ಕುಶಾಲನಗರದವರಾದ ಸೌಜನ್ಯಾ ‘ಚೌಕಟ್ಟು’, ‘ಫನ್’ ಸಿನಿಮಾಗಳಲ್ಲಿ ನಟಿಸಿದ್ದರು. ಹಲವು ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಕುಂಬಳಗೋಡು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p id="thickbox_headline"><strong>ಮಗಳ ಸಾವಿನ ಬಗ್ಗೆ ಅನುಮಾನ:ಸೌಜನ್ಯತಂದೆಯಿಂದ ದೂರು</strong></p>.<p><strong>ರಾಮನಗರ: </strong>ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ನಟಿಸೌಜನ್ಯತಂದೆ ಪ್ರಭು ಮಾದಪ್ಪ ಕುಂಬಳಗೋಡು ಠಾಣೆ ಪೊಲೀಸರಿಗೆ ಗುರುವಾರ ರಾತ್ರಿ ದೂರು ನೀಡಿದರು.</p>.<p>ಸೌಜನ್ಯಆಪ್ತ ಸಹಾಯಕ ಮಹೇಶ್ ಹಾಗೂ ನಟನೊಬ್ಬನ ವಿರುದ್ಧ ಅವರು ದೂರು ನೀಡಿದ್ದು, ಕೊಲೆಯ ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಈ ಸಂದರ್ಭ ಮಾಧ್ಯಮದವರ ಜೊತೆ ಮಾತನಾಡಿದ ಪ್ರಭು ಮಾದಪ್ಪ 'ಮಗಳು ಅಪಾರ್ಟ್ ಮೆಂಟ್ ನಲ್ಲಿ ಒಬ್ಬಳೇ ಇದ್ದಳು. ಯಾರೋ ಕಿರುಕುಳ ನೀಡಿ ಅವಳ ಸಾವಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು' ಎಂದು ಆಗ್ರಹಿಸಿದರು.</p>.<p>ಕುಶಾಲನಗರ ತಾಲ್ಲೂಕಿನ ಶುಂಠಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ಶುಕ್ರವಾರ ಅಂತ್ಯಕ್ರಿಯೆ ನಡೆಸುವುದಾಗಿ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p id="thickbox_headline">ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ವೊಂದರಲ್ಲಿ ಕಿರುತೆರೆ ನಟಿ ಸೌಜನ್ಯಾ (ಸವಿ ಮಾದಪ್ಪ) (25) ನೇಣು ಬಿಗಿದುಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಸ್ಥಳದಲ್ಲಿ ಪೊಲೀಸರಿಗೆ ನಾಲ್ಕು ಪುಟಗಳ ಡೆಟ್ನೋಟ್ ದೊರೆತಿದೆ. ‘ನನ್ನ ಸಾವಿಗೆ ನಾನೇ ಕಾರಣ. ಇತ್ತೀಚೆಗೆ ನನ್ನ ಮಾನಸಿಕ ಆರೋಗ್ಯ ಸರಿಯಿಲ್ಲ. ಆರೋಗ್ಯ ಸಹ ಕೈ ಕೊಟ್ಟಿದೆ. ವೈಯಕ್ತಿಕ ಕಾರಣಗಳಿಗೆ ಮನನೊಂದು ಈ ನಿರ್ಧಾರಕ್ಕೆ ಬಂದಿದ್ದೇನೆ’ ಎಂದು ಮರಣ ಪತ್ರ ಬರೆದಿರುವ ಸೌಜನ್ಯಾ, ಇದಕ್ಕಾಗಿ ಹೆತ್ತವರ ಕ್ಷಮೆ ಕೇಳಿದ್ದಾರೆ.</p>.<p>ಇತ್ತೀಚೆಗೆ ಇನ್ಸ್ಟಾಗ್ರಾಂನಲ್ಲಿ ಪುಟ್ಟ ಬರಹವೊಂದನ್ನು ಪೋಸ್ಟ್ ಮಾಡಿದ್ದ ಸೌಜನ್ಯಾ,ನಿಮ್ಮ ಜೀವನದ ಬಗ್ಗೆ ಹಾಗೂ ಗುರಿ ಬಗ್ಗೆ ಹೆಚ್ಚು ಗಮನ ಕೇಂದ್ರೀಕರಿಸಿದರೆ ನೀವು ನಿಮ್ಮ ಜೀವನದಲ್ಲಿ ಸಾಕಷ್ಟು ಜನರನ್ನು ಕಳೆದುಕೊಳ್ಳಬೇಕಾಗುತ್ತದೆ’ ಎಂದು ಅವರು ಬರೆದುಕೊಂಡಿದ್ದರು.</p>.<p>‘ಯಾರನ್ನೂ ಕೀಳಾಗಿ ಕಾಣಬೇಡಿ. ನಗುತ್ತಾ ಇರುವ ವ್ಯಕ್ತಿಗಳ ಹಿಂದೆಯೂ ಸಾಕಷ್ಟು ನೋವಿರುತ್ತದೆ, ಆ ಬಗ್ಗೆ ಯಾರಿಗೂ ಗೊತ್ತಿರುವುದಿಲ್ಲ’ ಎಂದು ಅವರು ಇನ್ನೊಂದು ಪೋಸ್ಟ್ನಲ್ಲಿ ಬರೆದಿದ್ದರು. ‘happiness, sadness ’ ಹ್ಯಾಶ್ ಟ್ಯಾಗ್ ಹಾಕಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ, ಗೆಳೆಯರು ಹಾಗೂ ಸಹೋದರರ ಫೋಟೋ ಹಾಕಿ ಅವರಿಗೆ ಧನ್ಯವಾದ ಹೇಳಿದ್ದರು. ಇದಾದ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>‘ಈ ಯುವತಿ ಕಳೆದ ಒಂದೂವರೆ ವರ್ಷದಿಂದ ಅಪಾರ್ಟ್ಮೆಂಟ್ನಲ್ಲಿ ಒಬ್ಬರೇ ವಾಸವಿದ್ದರು. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡುಬಂದಿದ್ದು, ನಾನಾ ಆಯಾಮಗಳ ಕುರಿತು ತನಿಖೆ ನಡೆಸುತ್ತಿದ್ದೇವೆ’ ರಾಮನಗರ ಎಸ್ಪಿ ಗಿರೀಶ್ ತಿಳಿಸಿದರು.</p>.<p>ಕೊಡಗು ಜಿಲ್ಲೆಯ ಕುಶಾಲನಗರದವರಾದ ಸೌಜನ್ಯಾ ‘ಚೌಕಟ್ಟು’, ‘ಫನ್’ ಸಿನಿಮಾಗಳಲ್ಲಿ ನಟಿಸಿದ್ದರು. ಹಲವು ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಕುಂಬಳಗೋಡು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p id="thickbox_headline"><strong>ಮಗಳ ಸಾವಿನ ಬಗ್ಗೆ ಅನುಮಾನ:ಸೌಜನ್ಯತಂದೆಯಿಂದ ದೂರು</strong></p>.<p><strong>ರಾಮನಗರ: </strong>ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ನಟಿಸೌಜನ್ಯತಂದೆ ಪ್ರಭು ಮಾದಪ್ಪ ಕುಂಬಳಗೋಡು ಠಾಣೆ ಪೊಲೀಸರಿಗೆ ಗುರುವಾರ ರಾತ್ರಿ ದೂರು ನೀಡಿದರು.</p>.<p>ಸೌಜನ್ಯಆಪ್ತ ಸಹಾಯಕ ಮಹೇಶ್ ಹಾಗೂ ನಟನೊಬ್ಬನ ವಿರುದ್ಧ ಅವರು ದೂರು ನೀಡಿದ್ದು, ಕೊಲೆಯ ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಈ ಸಂದರ್ಭ ಮಾಧ್ಯಮದವರ ಜೊತೆ ಮಾತನಾಡಿದ ಪ್ರಭು ಮಾದಪ್ಪ 'ಮಗಳು ಅಪಾರ್ಟ್ ಮೆಂಟ್ ನಲ್ಲಿ ಒಬ್ಬಳೇ ಇದ್ದಳು. ಯಾರೋ ಕಿರುಕುಳ ನೀಡಿ ಅವಳ ಸಾವಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು' ಎಂದು ಆಗ್ರಹಿಸಿದರು.</p>.<p>ಕುಶಾಲನಗರ ತಾಲ್ಲೂಕಿನ ಶುಂಠಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ಶುಕ್ರವಾರ ಅಂತ್ಯಕ್ರಿಯೆ ನಡೆಸುವುದಾಗಿ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>