ಮುಂಬೈ: ರಮಾನಂದ ಸಾಗರ್ ಅವರ ಜನಪ್ರಿಯ 'ರಾಮಾಯಣ' ಧಾರಾವಾಹಿಯಲ್ಲಿ ರಾವಣ ಪಾತ್ರ ನಿರ್ವಹಿಸಿದ್ದ ನಟ ಅರವಿಂದ ತ್ರಿವೇದಿ (82) ಮಂಗಳವಾರ ರಾತ್ರಿ ನಿಧನರಾದರು.
ಕೆಲವು ಮಾಧ್ಯಮಗಳ ವರದಿಗಳ ಪ್ರಕಾರ, ಅರವಿಂದ ತ್ರಿವೇದಿ ಅವರು ಕೆಲವು ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದರು ಹಾಗೂ ಹೃದಯಾಘಾತ, ಬಹುಅಂಗಾಂಗ ವೈಫಲ್ಯದ ಕಾರಣಗಳಿಂದಾಗಿ ಅವರು ಸಾವಿಗೀಡಾದರು. ಮುಂಬೈನ ದಹನುಕರವಾಡಿಯಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ.
ಗುಜರಾತಿ ಸಿನಿಮಾಗಳಲ್ಲಿ 40 ವರ್ಷಗಳ ನಟನೆಯ ಸುದೀರ್ಘ ಪ್ರಯಾಣದಲ್ಲಿ ಹಲವು ಚಿತ್ರಗಳು ಜನಪ್ರಿಯತೆ ಪಡೆದಿವೆ. ಹಿಂದಿ ಮತ್ತು ಗುಜರಾತಿಯ ಸಾಮಾಜಿಕ, ಪೌರಾಣಿಕ ಕಥೆಯಾಧಾರಿತ ಸುಮಾರು 300 ಸಿನಿಮಾಗಳಲ್ಲಿ ಅರವಿಂದ ಅಭಿನಯಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಅವರನ್ನು ಗುರುತಿಸುವಂತೆ ಮಾಡಿದ್ದು ರಾಮಾಯಣ ಧಾರಾವಾಹಿಯ 'ರಾವಣ' ಪಾತ್ರ. ಇದರೊಂದಿಗೆ ಖ್ಯಾತಿ ತಂದುಕೊಟ್ಟ ಮತ್ತೊಂದು ಧಾರಾವಾಹಿ 'ವಿಕ್ರಮ್ ಔರ್ ಬೇತಾಳ್'.
Sad to know about the demise of well known theatre,tv & film actor #ArvindTrivedi ji due to massive heart attack.
— Ashoke Pandit (@ashokepandit) October 6, 2021
My heartfelt condolences to his entire family & near ones.
ॐ शांति !
🙏🙏🙏 pic.twitter.com/4UOHPrvZEd
ಅರವಿಂದ ತ್ರಿವೇದಿ ಅವರು 1991ರಿಂದ 1996ರ ವರೆಗೂ ಸಂಸತ್ ಸದಸ್ಯರಾಗಿದ್ದರು. ಗುಜರಾತ್ನ ಸಾಬರ್ಕಾಂಠಾ ಜಿಲ್ಲೆಯಿಂದ ಅವರು ಆಯ್ಕೆಯಾಗಿದ್ದರು. ವಿಜಯ್ ಆನಂದ್ ಅವರ ನಂತರ 2002ರಿಂದ 2003ರವರೆಗೂ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್ಸಿ) ಮುಖ್ಯಸ್ಥರಾಗಿದ್ದರು.
ಕಳೆದ ವರ್ಷ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ದೂರದರ್ಶನ ರಾಮಾಯಣ ಧಾರವಾಹಿಯನ್ನು ಮರುಪ್ರಸಾರ ಮಾಡಿದಾಗ, ಆ ಧಾರಾವಾಹಿಯ ಎಲ್ಲ ಹಿರಿಯ ನಟರು ಮತ್ತೆ ಮುನ್ನೆಲೆಗೆ ಬಂದರು. ಹಲವು ಕಲಾವಿದರು ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆ ತೆರೆದು ಸಕ್ರಿಯರಾದರು.
#RIP #ArvindTrivedi 🙏
— Movies N Memories (@BombayBasanti) October 6, 2021
Veteran Gujarati actor, former lawmaker, #Ravan of #Ramayan, Arvind Trivedi passed away at the age of 82.#RestInPeace #OMShanti
Om Shanti! pic.twitter.com/TfdQXzUuNg
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.