ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದನವನದ ನಟ, ಕಿರುತೆರೆ ಕಲಾವಿದ ಶಂಕರರಾವ್‌ ನಿಧನ

Last Updated 18 ಅಕ್ಟೋಬರ್ 2021, 8:33 IST
ಅಕ್ಷರ ಗಾತ್ರ

ಚಂದನವನದ ಹಿರಿಯನಟ, ಕಿರುತೆರೆ ಕಲಾವಿದ ಶಂಕರ್‌ರಾವ್‌ (84) ಅವರು ಸೋಮವಾರ ನಿಧನರಾದರು. ಅವರು ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಶಂಕರರಾವ್‌ ಮೂಲತಃ ತುಮಕೂರಿನವರು. ಬಾಲ್ಯದಲ್ಲಿ ನಟನೆಯ ಆಸಕ್ತಿ ಹೊಂದಿದ್ದ ಅವರು, ತೆಲುಗು ಚಿತ್ರಗಳನ್ನು ನೋಡಿ ಸಿನಿಮಾ ಕ್ಷೇತ್ರದ ಮೇಲೆ ಆಸಕ್ತಿ ಬೆಳೆಸಿಕೊಂಡರು.

1956ರಲ್ಲಿ ಬೆಂಗಳೂರಿಗೆ ಬಂದ ಅವರು. ‘ಗೆಳೆಯರ ಬಳಗ’ ಎಂಬ ರಂಗತಂಡ ಕಟ್ಟಿ ಅದರ ಮೂಲಕ ನಾಟಕ ಪ್ರದರ್ಶನ ಮಾಡುತ್ತಿದ್ದರು. ‘ನಟರಂಗ’ ತಂಡದ ಜೊತೆಗೂ ಶಂಕರ್ ರಾವ್ ಗುರುತಿಸಿಕೊಂಡಿದ್ದರು.

ನಾಟಕಗಳಲ್ಲಿ ಶಂಕರರಾವ್‌ ಅಭಿನಯ ನೋಡಿದ ನಿರ್ಮಾಪಕರೊಬ್ಬರು ‘ಯಾರ ಸಾಕ್ಷಿ’ ಸಿನಿಮಾದಲ್ಲಿ ಅವರಿಗೆ ಮೊದಲ ಅವಕಾಶ ನೀಡಿದರು. ನಂತರ ಶಂಕರ್ ರಾವ್ ಅವರಿಗೆ ಸಾಲು ಅವಕಾಶಗಳು ಸಿಕ್ಕಿದವು.
‘ಪಾಪಪಾಂಡು’ ಧಾರಾವಾಹಿಯ ಬಾಲ್ ರಾಜ್, ‘ಧ್ರುವ’ ಹಾಗೂ ‘ಅಪ್ಪು’ ಚಿತ್ರಗಳ ಉಪನ್ಯಾಸಕ, ‘ಬಿಸಿಬಿಸಿ’ ಚಿತ್ರದಲ್ಲಿ ರಸಿಕ ಮನಸ್ಸಿನ ತಾತ... ಹೀಗೆ ಹಲವು ಪಾತ್ರಗಳು ಚಿತ್ರರಸಿಕರ ಮನಗೆದ್ದಿದ್ದವು.

ಮಧ್ಯಾಹ್ನ ಬನಶಂಕರಿ ಚಿತಾಗಾರದಲ್ಲಿ ಶಂಕರ್ ರಾವ್ ಅವರ ಅಂತ್ಯಕ್ರಿಯೆ ನಡೆದಿದೆಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT