ಡಾಲಿ ಧನಂಜಯ್, ಅಮೃತಾ ಅಯ್ಯಂಗಾರ್, ಚರಣ್ ರಾಜ್, ಜೈ ಜಗದೀಶ್, ಮೋಹನ್, ನಿಶ್ವಿಕಾ ನಾಯ್ಡು ಸೇರಿದಂತೆ ಚಲನಚಿತ್ರದ ವಿವಿಧ ಕಲಾವಿದರು ಭಾಗವಹಿಸಿ, ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ‘ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್’ ಧಾರಾವಾಹಿಯ ಹೊಸ ಹಾಡನ್ನು ನಟ ಯಶ್ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮವು ಇದೇ ಶನಿವಾರ ಮತ್ತು ಭಾನುವಾರ ಸಂಜೆ 7ಕ್ಕೆ ಪ್ರಸಾರ ಆಗಲಿದೆ ಎಂದು ವಾಹಿನಿಯು ಪ್ರಕಟಣೆಯಲ್ಲಿ ತಿಳಿಸಿದೆ.