ಚಿತ್ರದಲ್ಲಿ ಪ್ರಶಾಂತ್, ಪ್ರಭುದೇವ, ಸ್ನೇಹ, ಲೈಲಾ, ಮೀನಾಕ್ಷಿ ಚೌಧರಿ, ಮೋಹನ್, ಜಯರಾಮ್, ಅಜ್ಮಲ್ ಅಮೀರ್ ಮತ್ತು ಯೋಗಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಸಂಗೀತ ಹಾಗೂ ಸಿದ್ಧಾರ್ಥ ನುನಿ ಛಾಯಾಗ್ರಹಣವಿದೆ.
ರಾಜಕೀಯಕ್ಕೆ ಪ್ರವೇಶ:
ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ದಳಪತಿ ವಿಜಯ್ ಇತ್ತೀಚೆಗೆ ಘೋಷಿಸಿದ್ದರು. ತಮ್ಮ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ (ತಮಿಳುನಾಡು ವಿಜಯ ಪಕ್ಷ) ಎಂದು ನಾಮಕರಣ ಮಾಡಿದ್ದು, 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.