ಮಾಗಡಿ ರಸ್ತೆ ಬಳಿ ಖ್ಯಾತ ನಟ, ದಿವಂಗತ ವಿಷ್ಣುವರ್ಧನ್ ಅವರ ಪುತ್ಥಳಿ ಪುನರ್ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಗಿದೆ. ಕಳೆದ ಶುಕ್ರವಾರ ಮಾಗಡಿ ರಸ್ತೆಯಲ್ಲಿನ ವಿಷ್ಣುವರ್ಧನ್ ಪ್ರತಿಮೆಯನ್ನು ಯಾರೋ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. ಈ ಘಟನೆಗೆ ಸಂಬಂಧಿಸಿ ವಿಷ್ಣು ಅಭಿಮಾನಿಗಳು ಹಾಗೂ ಚಂದನವನ ನಟ–ನಟಿಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಬೆಂಗಳೂರಿನ ಮಾಗಡಿ ರಸ್ತೆಯ ಬಾಲಗಂಗಾಧರ ವೃತ್ತದಲ್ಲಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಪ್ರತಿಮ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗಿದೆ. ಈ ಮೊದಲು ಇದ್ದ ಪ್ರತಿಮೆಗಿಂತ 15ಮೀಟರ್ ದೂರದಲ್ಲಿ ಹೊಸ ಪ್ರತಿಮೆಯ ನಿರ್ಮಾಣ ಆಗಲಿದೆ. ಹೊಸದಾಗಿ ನಿರ್ಮಾಣವಾಗಲಿರುವ ಪ್ರತಿಮೆ ಆರು ಅಡಿ ಉದ್ದ ಇರಲಿದ್ದು, ನಿಂತಿರುವ ಭಂಗಿಯಲ್ಲಿ ವಿಷ್ಣು ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗುತ್ತದೆ.
ಪುತ್ಥಳಿ ಪುನರ್ನಿರ್ಮಾಣ ಕಾರ್ಯದಲ್ಲಿ ವಿಷ್ಣು ಅಭಿಮಾನಿಗಳು, ಅಳಿಯ ಹಾಗೂ ಕಿರುತೆರೆಯ ಖ್ಯಾತ ನಟ ಅನಿರುದ್ಧ ಸ್ಥಳದಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.