ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನೇರುಘಟ್ಟ: ಕರುಳಿನ ತೊಂದರೆಯಿಂದ ಬಳಲುತ್ತಿದ್ದ ಕಾಡೆಮ್ಮೆ ಸಾವು

Last Updated 22 ಜೂನ್ 2022, 20:53 IST
ಅಕ್ಷರ ಗಾತ್ರ

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನದಸಸ್ಯಾಹಾರಿ ಸಫಾರಿಯಲ್ಲಿನ ಕಾಡೆಮ್ಮೆ ಕುಮ್ಟಾ(11) ಮೃತಪಟ್ಟಿದೆ.

ಕುಮ್ಟಾಳನ್ನು 2012ರಲ್ಲಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಿಂದ ತರಲಾಗಿತ್ತು. ಈ ಕಾಡೆಮ್ಮೆಯು ಬನ್ನೇರುಘಟ್ಟ ಉದ್ಯಾನಕ್ಕೆ ಬಂದ ನಂತರ ಎರಡು ಗಂಡು ಮತ್ತು ಎರಡು ಹೆಣ್ಣು ಮರಿಗಳಿಗೆ ಜನ್ಮ ನೀಡಿದೆ. ಜೈವಿಕ ಉದ್ಯಾನದಸಸ್ಯಾಹಾರಿ ಸಫಾರಿಯಲ್ಲಿ 10 ಕಾಡೆಮ್ಮೆಗಳಿದ್ದವು. ಕುಮ್ಟಾ ನಿಧನದಿಂದ ಕಾಡೆಮ್ಮೆಗಳ ಸಂಖ್ಯೆ ಇದೀಗ 9ಕ್ಕೆ ಇಳಿದಿದೆ ಎಂದು ಉದ್ಯಾನವನ ತಿಳಿಸಿದೆ.

ಈ ಕಾಡೆಮ್ಮೆ ಕರುಳಿನ ತೊಂದರೆಯಿಂದ ಬಳಲುತ್ತಿತ್ತು ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಅಂಗಾಂಗಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಉದ್ಯಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT