<p>ಹನೂರು: ತಾಲ್ಲೂಕಿನ ಗೋಪಿನಾಥಂ ಜಲಾಶಯದಲ್ಲಿ ಮೂರು ದಿನಗಳಿಂದ ಮಧ್ಯ ವಯಸ್ಕ ಗಂಡು ಕಾಡಾನೆಯೊಂದು ನಿಂತಿದ್ದು ಬಿಸಿಲ ಝಳಕ್ಕೆ ಅಸ್ವಸ್ಥಗೊಂಡಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.</p>.<p>ಗುರುವಾರ ದಿಂದಲೂ ಆನೆ ಜಲಾಶಯದ ಹಿನ್ನೀರಿನಲ್ಲಿ ನಿಂತಲ್ಲೇ ಇದ್ದು ಸಾರ್ವಜನಿಕರು ಜಲಾಶಯದತ್ತ ಬರುತ್ತಿದ್ದಾರೆ. ಆನೆ ಕಾಲಿಗೆ ಗಾಯವಾಗಿದ್ದು ಕುಂಟುತ್ತಾ ನಡೆಯುತ್ತಿದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದರು.</p>.<p>‘ಮೂರು ದಿನಗಳಿಂದ ಆನೆ ನೀರಿನಲ್ಲಿದೆ ಎಂದರೆ ಆರೋಗ್ಯದಲ್ಲಿ ಸಮಸ್ಯೆಯಾಗಿರಬಹುದು. ಕೂಡಲೇ ಪಶು ವೈದ್ಯರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲಿಸಲಾಗುವುದು’ ಎಂದು ಕಾವೇರಿ ವನ್ಯಧಾಮದ ಸಹಾಯ ಅರಣ್ಯ ಸಂರಕ್ಷಣಾಧಿಕಾರಿ ಮರಿಸ್ವಾಮಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-37-1201816505</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹನೂರು: ತಾಲ್ಲೂಕಿನ ಗೋಪಿನಾಥಂ ಜಲಾಶಯದಲ್ಲಿ ಮೂರು ದಿನಗಳಿಂದ ಮಧ್ಯ ವಯಸ್ಕ ಗಂಡು ಕಾಡಾನೆಯೊಂದು ನಿಂತಿದ್ದು ಬಿಸಿಲ ಝಳಕ್ಕೆ ಅಸ್ವಸ್ಥಗೊಂಡಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.</p>.<p>ಗುರುವಾರ ದಿಂದಲೂ ಆನೆ ಜಲಾಶಯದ ಹಿನ್ನೀರಿನಲ್ಲಿ ನಿಂತಲ್ಲೇ ಇದ್ದು ಸಾರ್ವಜನಿಕರು ಜಲಾಶಯದತ್ತ ಬರುತ್ತಿದ್ದಾರೆ. ಆನೆ ಕಾಲಿಗೆ ಗಾಯವಾಗಿದ್ದು ಕುಂಟುತ್ತಾ ನಡೆಯುತ್ತಿದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದರು.</p>.<p>‘ಮೂರು ದಿನಗಳಿಂದ ಆನೆ ನೀರಿನಲ್ಲಿದೆ ಎಂದರೆ ಆರೋಗ್ಯದಲ್ಲಿ ಸಮಸ್ಯೆಯಾಗಿರಬಹುದು. ಕೂಡಲೇ ಪಶು ವೈದ್ಯರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲಿಸಲಾಗುವುದು’ ಎಂದು ಕಾವೇರಿ ವನ್ಯಧಾಮದ ಸಹಾಯ ಅರಣ್ಯ ಸಂರಕ್ಷಣಾಧಿಕಾರಿ ಮರಿಸ್ವಾಮಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-37-1201816505</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>