<p>ಹೂವಿನಹಡಗಲಿ: ‘ಅಭಿವೃದ್ಧಿ ಹೆಸರಲ್ಲಿ ಗಿಡ–ಮರ ಕಡಿಯುವುದು ಸರಿಯಲ್ಲ. ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ’ ಎಂದು ನಿವೃತ್ತ ಶಿಕ್ಷಕ ಗಣೇಶ ಹವಾಲ್ದಾರ್ ಹೇಳಿದರು.</p>.<p>ತಾಲ್ಲೂಕಿನ ಹೊಳಗುಂದಿ ಗ್ರಾಮದ ಸಿದ್ದೇಶ್ವರ ದೇವಸ್ಥಾನದಲ್ಲಿ ಪರಿವರ್ತನಾ ಸೇವಾ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ ಪಕ್ಷಿಗಳಿಗೆ ಗುಟುಕು ನೀರಿನ ಅರವಟಿಗೆ ವಿತರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳಿಗೆ ಕುಡಿಯಲು ನೀರು ಸಿಗದೆ ಸಾವಿಗೀಡಾಗುತ್ತವೆ. ಅವುಗಳ ದಾಹ ನೀಗಿಸಲು ಗಿಡ– ಮರಗಳಲ್ಲಿ ನೀರಿಡಬೇಕು. ಅರಣ್ಯದಂಚಿನಲ್ಲೂ ನೀರು ಸಿಗುವಂತೆ ಮಾಡಬೇಕು. ಪಶು, ಪಕ್ಷಿಗಳಿಗೆ ನೀರಿನ ಅರವಟಿಗೆ ವ್ಯವಸ್ಥೆ ಮಾಡಲು ಶ್ರಮಿಸಬೇಕು’ ಎಂದು ಅವರು ತಿಳಿಸಿದರು.</p>.<p>ಮುಖ್ಯಶಿಕ್ಷಕ ಮಲ್ಲೇಶಪ್ಪ ಮಾತನಾಡಿ, ‘ಪರಿಸರ ಸಂರಕ್ಷಣೆಗೆ ಜನರ ಸಹಕಾರ ಅಗತ್ಯವಾಗಿದೆ. ಬಿಸಿಲ ತಾಪಕ್ಕೆ ಮೂಕ ಪ್ರಾಣಿ, ಪಕ್ಷಿಗಳು ತೊಂದರೆಗೆ ಒಳಗಾಗುವುದನ್ನು ತಪ್ಪಿಸಬೇಕು’ ಎಂದರು.</p>.<p>ಶಿಕ್ಷಕ ದ್ವಾರಕೀಶರೆಡ್ಡಿ, ಕೊಟ್ರೇಶ ಮಾತನಾಡಿದರು. ಲೇಖಕ ಆರ್.ಬಿ. ಗುರುಬಸವರಾಜ, ಎಚ್. ಗುರುಬಸವರಾಜ, ಎಂ. ಲೋಕೇಶ, ಎಚ್. ಕರಿಬಸಪ್ಪ, ನವೀನ ಕೃಷ್ಣ, ರಾಜನಗೌಡ ಪಾಟೀಲ, ಹನುಮಂತಪ್ಪ, ಕೊಟ್ರೇಶ ಹಾವನೂರು, ಎಚ್.ಎಂ. ಶಾಂತಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-25-602179295</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೂವಿನಹಡಗಲಿ: ‘ಅಭಿವೃದ್ಧಿ ಹೆಸರಲ್ಲಿ ಗಿಡ–ಮರ ಕಡಿಯುವುದು ಸರಿಯಲ್ಲ. ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ’ ಎಂದು ನಿವೃತ್ತ ಶಿಕ್ಷಕ ಗಣೇಶ ಹವಾಲ್ದಾರ್ ಹೇಳಿದರು.</p>.<p>ತಾಲ್ಲೂಕಿನ ಹೊಳಗುಂದಿ ಗ್ರಾಮದ ಸಿದ್ದೇಶ್ವರ ದೇವಸ್ಥಾನದಲ್ಲಿ ಪರಿವರ್ತನಾ ಸೇವಾ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ ಪಕ್ಷಿಗಳಿಗೆ ಗುಟುಕು ನೀರಿನ ಅರವಟಿಗೆ ವಿತರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳಿಗೆ ಕುಡಿಯಲು ನೀರು ಸಿಗದೆ ಸಾವಿಗೀಡಾಗುತ್ತವೆ. ಅವುಗಳ ದಾಹ ನೀಗಿಸಲು ಗಿಡ– ಮರಗಳಲ್ಲಿ ನೀರಿಡಬೇಕು. ಅರಣ್ಯದಂಚಿನಲ್ಲೂ ನೀರು ಸಿಗುವಂತೆ ಮಾಡಬೇಕು. ಪಶು, ಪಕ್ಷಿಗಳಿಗೆ ನೀರಿನ ಅರವಟಿಗೆ ವ್ಯವಸ್ಥೆ ಮಾಡಲು ಶ್ರಮಿಸಬೇಕು’ ಎಂದು ಅವರು ತಿಳಿಸಿದರು.</p>.<p>ಮುಖ್ಯಶಿಕ್ಷಕ ಮಲ್ಲೇಶಪ್ಪ ಮಾತನಾಡಿ, ‘ಪರಿಸರ ಸಂರಕ್ಷಣೆಗೆ ಜನರ ಸಹಕಾರ ಅಗತ್ಯವಾಗಿದೆ. ಬಿಸಿಲ ತಾಪಕ್ಕೆ ಮೂಕ ಪ್ರಾಣಿ, ಪಕ್ಷಿಗಳು ತೊಂದರೆಗೆ ಒಳಗಾಗುವುದನ್ನು ತಪ್ಪಿಸಬೇಕು’ ಎಂದರು.</p>.<p>ಶಿಕ್ಷಕ ದ್ವಾರಕೀಶರೆಡ್ಡಿ, ಕೊಟ್ರೇಶ ಮಾತನಾಡಿದರು. ಲೇಖಕ ಆರ್.ಬಿ. ಗುರುಬಸವರಾಜ, ಎಚ್. ಗುರುಬಸವರಾಜ, ಎಂ. ಲೋಕೇಶ, ಎಚ್. ಕರಿಬಸಪ್ಪ, ನವೀನ ಕೃಷ್ಣ, ರಾಜನಗೌಡ ಪಾಟೀಲ, ಹನುಮಂತಪ್ಪ, ಕೊಟ್ರೇಶ ಹಾವನೂರು, ಎಚ್.ಎಂ. ಶಾಂತಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-25-602179295</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>