<p>ಇಂಡಿ: ಪ್ರಕೃತಿ ಸಮತೋಲನ ಕಾಯ್ದುಕೊಂಡಾಗ ಮಾತ್ರ ಪ್ರಾಣಿ, ಪಕ್ಷಿ, ಮನುಷ್ಯ ಬದುಕು ಸಾಗಿಸಲು ಸಾಧ್ಯ. ಹೀಗಾಗಿ ಪ್ರತಿಯೊಬ್ಬರೂ ಪ್ರಕೃತಿಯನ್ನು ಪ್ರೀತಿಸಬೇಕು. ಪ್ರಾಣಿ, ಪಕ್ಷಿಗಳಿಗೆ ನೀರು, ಕಾಳು ಒದಗಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು ಎಂದು ಯಶವಂತರಾಯಗೌಡ ಪಾಟೀಲ ಫೌಂಡೇಷನ್ ಅಧ್ಯಕ್ಷ ವಿಠಲಗೌಡ ಪಾಟೀಲ ಹೇಳಿದರು.</p>.<p>ಅವರು ನಗರದ ವಾರ್ಡ್ 19ರಲ್ಲಿ ಯಶವಂತರಾಯಗೌಡ ವಿ. ಪಾಟೀಲ ಫೌಂಡೇಶನ್ ಭಾನುವಾರ ಹಮ್ಮಿಕೊಂಡಿದ್ದ ಹಕ್ಕಿಗೊಂದು ಹನಿ ನೀರು ಅಭಿಯಾನ -2026ಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಸಾವಳಸಂಗ, ಬಬಲಾದ, ಜೇವೂರ ಹಾಗೂ ಇಂಡಿ ಸೇರಿದಂತೆ ಹಲವು ಕಡೆಗಳಲ್ಲಿ ಅರಣ್ಯ ಇಲಾಖೆ ಗಿಡ ಮರಗಳನ್ನು ಬೆಳೆಸುವುದರ ಜೊತೆ ಅರಣ್ಯ ಬೆಳವಣಿಗೆಗೆ ಶ್ರಮಿಸುತ್ತಿರುವುದು ಸಂತಸದ ಸಂಗತಿ ಎಂದರು.</p>.<p>ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಅರಣ್ಯ ಇಲಾಖೆಯ ಆರ್.ಎಫ್.ಓ ಎಸ್.ಜಿ.ಸಂಗಾಲಕ, ಮಂಜುನಾಥ ಧೂಳೆ, ಧನರಾಜ ಮುಜಗೊಂಡ ಮಾತನಾಡಿದರು.</p>.<p>ಪುರಸಭೆ ಪೌರಾಯುಕ್ತ ಶಿವಾನಂದ ಪೂಜಾರಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಜೀತ ಧನಶೆಟ್ಟಿ, ನೀಲಕಂಠಗೌಡ ಪಾಟೀಲ, ಸುಧೀರ ಕರಕಟ್ಟಿ, ಸತೀಶ ಹತ್ತಿ, ಅವಿನಾಶ ಬಗಲಿ, ಸತೀಶ ಕುಂಬಾರ, ಸಣ್ಣಪ್ಪ ತಳವಾರ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-26-1411084011</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಂಡಿ: ಪ್ರಕೃತಿ ಸಮತೋಲನ ಕಾಯ್ದುಕೊಂಡಾಗ ಮಾತ್ರ ಪ್ರಾಣಿ, ಪಕ್ಷಿ, ಮನುಷ್ಯ ಬದುಕು ಸಾಗಿಸಲು ಸಾಧ್ಯ. ಹೀಗಾಗಿ ಪ್ರತಿಯೊಬ್ಬರೂ ಪ್ರಕೃತಿಯನ್ನು ಪ್ರೀತಿಸಬೇಕು. ಪ್ರಾಣಿ, ಪಕ್ಷಿಗಳಿಗೆ ನೀರು, ಕಾಳು ಒದಗಿಸುವ ಕೆಲಸ ಪ್ರತಿಯೊಬ್ಬರು ಮಾಡಬೇಕು ಎಂದು ಯಶವಂತರಾಯಗೌಡ ಪಾಟೀಲ ಫೌಂಡೇಷನ್ ಅಧ್ಯಕ್ಷ ವಿಠಲಗೌಡ ಪಾಟೀಲ ಹೇಳಿದರು.</p>.<p>ಅವರು ನಗರದ ವಾರ್ಡ್ 19ರಲ್ಲಿ ಯಶವಂತರಾಯಗೌಡ ವಿ. ಪಾಟೀಲ ಫೌಂಡೇಶನ್ ಭಾನುವಾರ ಹಮ್ಮಿಕೊಂಡಿದ್ದ ಹಕ್ಕಿಗೊಂದು ಹನಿ ನೀರು ಅಭಿಯಾನ -2026ಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಸಾವಳಸಂಗ, ಬಬಲಾದ, ಜೇವೂರ ಹಾಗೂ ಇಂಡಿ ಸೇರಿದಂತೆ ಹಲವು ಕಡೆಗಳಲ್ಲಿ ಅರಣ್ಯ ಇಲಾಖೆ ಗಿಡ ಮರಗಳನ್ನು ಬೆಳೆಸುವುದರ ಜೊತೆ ಅರಣ್ಯ ಬೆಳವಣಿಗೆಗೆ ಶ್ರಮಿಸುತ್ತಿರುವುದು ಸಂತಸದ ಸಂಗತಿ ಎಂದರು.</p>.<p>ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಅರಣ್ಯ ಇಲಾಖೆಯ ಆರ್.ಎಫ್.ಓ ಎಸ್.ಜಿ.ಸಂಗಾಲಕ, ಮಂಜುನಾಥ ಧೂಳೆ, ಧನರಾಜ ಮುಜಗೊಂಡ ಮಾತನಾಡಿದರು.</p>.<p>ಪುರಸಭೆ ಪೌರಾಯುಕ್ತ ಶಿವಾನಂದ ಪೂಜಾರಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಜೀತ ಧನಶೆಟ್ಟಿ, ನೀಲಕಂಠಗೌಡ ಪಾಟೀಲ, ಸುಧೀರ ಕರಕಟ್ಟಿ, ಸತೀಶ ಹತ್ತಿ, ಅವಿನಾಶ ಬಗಲಿ, ಸತೀಶ ಕುಂಬಾರ, ಸಣ್ಣಪ್ಪ ತಳವಾರ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-26-1411084011</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>