<p>ಸೋಮವಾರಪೇಟೆ: ಇಲ್ಲಿನ ವಲಯ ಅರಣ್ಯ ಇಲಾಖೆಯಿಂದ ಟೈಗರ್ಸ್ ಔಟ್ ಸೈಡ್ ಟೈಗರ್ಸ್ ರಿಸರ್ವ್ ಎಂಬ ಯೋಜನೆಯಡಿಯಲ್ಲಿ 2025-26ನೇ ವರ್ಷದ ಕಾರ್ಯಕ್ರಮದಲ್ಲಿ ಕಾಡಂಚಿನಲ್ಲಿ ಬರುವ ಗ್ರಾಮಗಳ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಜೇನು ಪೆಟ್ಟಿಗೆ, ಜೇನು ತೆಗೆಯುವ ಯಂತ್ರವನ್ನು ಈಚೆಗೆ ವಿತರಿಸಲಾಯಿತು.</p>.<p>ಸಮೀಪದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ವಿತರಿಸಿದರು.</p>.<p>ನಂತರ ಮಾತನಾಡಿದ ಅವರು, ‘ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಸೂಕ್ತ ಫಲಾನುಭವಿಗಳನ್ನು ಆಯ್ಕೆ ಮಾಡಿ ನೀಡಬೇಕು. ಯೋಜನೆಗಳನ್ನು ಪಡೆದ ಜನರು ಅದನ್ನು ಸರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಎಸಿಎಫ್ ಗೋಪಾಲ್, ಆರ್ ಎಫ್ ಒ ಶೈಲೇಂದ್ರಕುಮಾರ್, ಶನಿವಾರಸಂತೆ ಪೂಜಾಶ್ರೀ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-51-1911565227</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೋಮವಾರಪೇಟೆ: ಇಲ್ಲಿನ ವಲಯ ಅರಣ್ಯ ಇಲಾಖೆಯಿಂದ ಟೈಗರ್ಸ್ ಔಟ್ ಸೈಡ್ ಟೈಗರ್ಸ್ ರಿಸರ್ವ್ ಎಂಬ ಯೋಜನೆಯಡಿಯಲ್ಲಿ 2025-26ನೇ ವರ್ಷದ ಕಾರ್ಯಕ್ರಮದಲ್ಲಿ ಕಾಡಂಚಿನಲ್ಲಿ ಬರುವ ಗ್ರಾಮಗಳ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಜೇನು ಪೆಟ್ಟಿಗೆ, ಜೇನು ತೆಗೆಯುವ ಯಂತ್ರವನ್ನು ಈಚೆಗೆ ವಿತರಿಸಲಾಯಿತು.</p>.<p>ಸಮೀಪದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ವಿತರಿಸಿದರು.</p>.<p>ನಂತರ ಮಾತನಾಡಿದ ಅವರು, ‘ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಸೂಕ್ತ ಫಲಾನುಭವಿಗಳನ್ನು ಆಯ್ಕೆ ಮಾಡಿ ನೀಡಬೇಕು. ಯೋಜನೆಗಳನ್ನು ಪಡೆದ ಜನರು ಅದನ್ನು ಸರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಎಸಿಎಫ್ ಗೋಪಾಲ್, ಆರ್ ಎಫ್ ಒ ಶೈಲೇಂದ್ರಕುಮಾರ್, ಶನಿವಾರಸಂತೆ ಪೂಜಾಶ್ರೀ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-51-1911565227</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>