ನೀರು, ಆಹಾರ ಇಲ್ಲದೆ ಪಕ್ಷಿಗಳು ಜೀವ ಕಳೆದುಕೊಳ್ಳುವ ಭೀತಿ ಎಲ್ಲೆಡೆ ಕಾಡುತ್ತಿದೆ. ಈ ಸಮಸ್ಯೆ ನಿವಾರಣೆಗಾಗಿ ಗುಮ್ಮಟ ನಗರಿಯ ಜನರು ತಮ್ಮ ಮನೆಗಳ ಎದುರು, ಮಾಳಿಗೆ ಮೇಲೆ ಹಾಗೂ ವಿವಿಧ ಸಂಘ–ಸಂಸ್ಥೆಗಳು ರಸ್ತೆ ಬದಿಯ ಮರಗಳಿಗೆ, ಪಾರ್ಕ್ಗಳಲ್ಲಿ ನೀರು, ಆಹಾರದ ವ್ಯವಸ್ಥೆ ಮಾಡುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತವಾಗಿದೆ.