<p><strong>ನವದೆಹಲಿ: </strong>ಭಾರತದ ಹಲವೆಡೆ ಅಂಫಾನ್ ಚಂಡಮಾರುತಪ್ರಭಾವ ಬೀರಲಿದ್ದು, ದಕ್ಷಿಣ ರಾಜ್ಯಗಳಲ್ಲಿ ಈ ಪ್ರಭಾವ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭಾನುವಾರ ಎಚ್ಚರಿಕೆ ನೀಡಿದೆ.</p>.<p>ಮುಂದಿನ 12 ಗಂಟೆಗಳ ಅವಧಿಯಲ್ಲಿಆಗ್ನೇಯ ಬಂಗಾಳಕೊಲ್ಲಿ ಹಾಗೂ ನೆರೆಹೊರೆಯ ರಾಜ್ಯಗಳಲ್ಲಿ ತನ್ನ ಪ್ರಭಾವವನ್ನು ತೀವ್ರಗೊಳಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.ನಾಳೆ ಬೆಳಿಗ್ಗೆವರೆಗೆ ಇದರತೀವ್ರತೆ ಹೆಚ್ಚಾಗಲಿದೆ ಎಂದುಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.</p>.<p>ಈ ಸಂಬಂಧ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಗಳು ಮುನ್ನೆಚ್ಚರಿಕೆ ವಹಿಸಿವೆ. ಚಂಡಮಾರುತದಿಂದಾಗುವ ಅನಾಹುತಗಳನ್ನು ತಡೆಗಟ್ಟಲು ಎಲ್ಲಾ ಸಿದ್ಧತೆ ಮಾಡಿಕೊಂಡಿವೆ. ಈಗಾಗಲೆ ಒಡಿಶಾದಲ್ಲಿ ಚಂಡಮಾರುತ ಅಂಫಾನ್ ಪ್ರಭಾವ ಬೀರುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರವೇ 12 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.</p>.<p>ಒಡಿಶಾ ಉತ್ತರ ಭಾಗದ ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪರಿಸ್ಥಿತಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಚಂಡಮಾರುತದಿಂದ ಹಾನಿ ಉಂಟಾದರೆ, ಆಶ್ರಯಕ್ಕಾಗಿ ಕಟ್ಟಡಗಳನ್ನು ಗುರುತಿಸುವಂತೆ ತಿಳಿಸಲಾಗಿದೆ. ಬಹುತೇಕ ಆಶ್ರಯ ಕಟ್ಟಡಗಳನ್ನು ಕೋವಿಡ್–19 ಕ್ವಾರಂಟೈನ್ ಕೇಂದ್ರಗಳಾಗಿ ಬಳಕೆ ಮಾಡಲಾಗುತ್ತಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/cyclone-amphan-set-to-intensify-12odisha-districts-on-alert-728204.html" target="_blank">ಅಂಫಾನ್ ಚಂಡಮಾರುತ: ಒಡಿಶಾದ 12 ಜಿಲ್ಲೆಗಳಲ್ಲಿ ಅಲರ್ಟ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತದ ಹಲವೆಡೆ ಅಂಫಾನ್ ಚಂಡಮಾರುತಪ್ರಭಾವ ಬೀರಲಿದ್ದು, ದಕ್ಷಿಣ ರಾಜ್ಯಗಳಲ್ಲಿ ಈ ಪ್ರಭಾವ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭಾನುವಾರ ಎಚ್ಚರಿಕೆ ನೀಡಿದೆ.</p>.<p>ಮುಂದಿನ 12 ಗಂಟೆಗಳ ಅವಧಿಯಲ್ಲಿಆಗ್ನೇಯ ಬಂಗಾಳಕೊಲ್ಲಿ ಹಾಗೂ ನೆರೆಹೊರೆಯ ರಾಜ್ಯಗಳಲ್ಲಿ ತನ್ನ ಪ್ರಭಾವವನ್ನು ತೀವ್ರಗೊಳಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.ನಾಳೆ ಬೆಳಿಗ್ಗೆವರೆಗೆ ಇದರತೀವ್ರತೆ ಹೆಚ್ಚಾಗಲಿದೆ ಎಂದುಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.</p>.<p>ಈ ಸಂಬಂಧ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಗಳು ಮುನ್ನೆಚ್ಚರಿಕೆ ವಹಿಸಿವೆ. ಚಂಡಮಾರುತದಿಂದಾಗುವ ಅನಾಹುತಗಳನ್ನು ತಡೆಗಟ್ಟಲು ಎಲ್ಲಾ ಸಿದ್ಧತೆ ಮಾಡಿಕೊಂಡಿವೆ. ಈಗಾಗಲೆ ಒಡಿಶಾದಲ್ಲಿ ಚಂಡಮಾರುತ ಅಂಫಾನ್ ಪ್ರಭಾವ ಬೀರುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರವೇ 12 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.</p>.<p>ಒಡಿಶಾ ಉತ್ತರ ಭಾಗದ ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪರಿಸ್ಥಿತಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಚಂಡಮಾರುತದಿಂದ ಹಾನಿ ಉಂಟಾದರೆ, ಆಶ್ರಯಕ್ಕಾಗಿ ಕಟ್ಟಡಗಳನ್ನು ಗುರುತಿಸುವಂತೆ ತಿಳಿಸಲಾಗಿದೆ. ಬಹುತೇಕ ಆಶ್ರಯ ಕಟ್ಟಡಗಳನ್ನು ಕೋವಿಡ್–19 ಕ್ವಾರಂಟೈನ್ ಕೇಂದ್ರಗಳಾಗಿ ಬಳಕೆ ಮಾಡಲಾಗುತ್ತಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/cyclone-amphan-set-to-intensify-12odisha-districts-on-alert-728204.html" target="_blank">ಅಂಫಾನ್ ಚಂಡಮಾರುತ: ಒಡಿಶಾದ 12 ಜಿಲ್ಲೆಗಳಲ್ಲಿ ಅಲರ್ಟ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>