ಮೊದಲ ಹಂತದಲ್ಲಿ ಸ್ಮಯೊರ್, ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (ಎನ್.ಎಂ.ಡಿ.ಸಿ.) ಹಾಗೂ ಜೆ.ಎಸ್.ಡಬ್ಲ್ಯೂ ಅನುದಾನದಲ್ಲಿ ಶ್ರೀ ಕುಮಾರಸ್ವಾಮಿ ದೇಗುಲದಿಂದ ದೇವಗಿರಿಯ ವರೆಗೆ ಸಿ.ಸಿ. ರಸ್ತೆ ನಿರ್ಮಾಣವಾಗಲಿದೆ. ಇದಾದ ಬಳಿಕ ಸ್ಮಯೊರ್, ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, 24 ಗಂಟೆ ವಿದ್ಯುತ್ ಪೂರೈಕೆ, ವೈದ್ಯಕೀಯ ಸೇವೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ಕೆಲಸ ಎರಡನೇ ಹಂತದಲ್ಲಿ ಕೈಗೆತ್ತಿಕೊಳ್ಳಲಿದೆ.