ಸಿರುಗುಪ್ಪದ ಹಚ್ಚೊಳ್ಳಿ–ರಾರಾವಿ ಪ್ರದೇಶವುಅಳಿವಿನಂಚಿನಲ್ಲಿರುವ ಹೆಬ್ಬಕಗಳ(ಗ್ರೇಟ್ ಇಂಡಿಯನ್ ಬಸ್ಟರ್ಡ್) ಆವಾಸಸ್ಥಾನ ಹಾಗೂ ಸಂತಾನೋತ್ಪತ್ತಿ ಕೇಂದ್ರವಾಗಿದೆ.ಈ ಹಿನ್ನೆಲೆಯಲ್ಲಿ ಕರ್ನಾಟಕದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್ ಅವರಿಗೆ ಪತ್ರ ಬರೆದಿರುವ ಸಿನ್ಹಾ, ‘ವಿಶ್ವದಲ್ಲಿ ಇಂಥ ಹಕ್ಕಿಗಳ ಸಂಖ್ಯೆ ಪ್ರಸ್ತುತ 100ಕ್ಕಿಂತ ಕಡಿಮೆ ಇದೆ. ಹೀಗಾಗಿ ತಕ್ಷಣ ನಿರ್ಮಾಣ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ, ಕಾಮಗಾರಿಗಳ ಬಗ್ಗೆ ಪುನರ್ಪರಿಶೀಲನೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.