‘ಬ್ಯಾಂಕ್ಗೆ ನಗದು ಸಾಗಿಸುವ ಸಿಬ್ಬಂದಿ ಎಂದು ಹೇಳಿಕೊಂಡಿರುವ ವ್ಯಕ್ತಿಗಳು ಸುರಕ್ಷತಾ ವಿಧಾನಗಳನ್ನು ಅನುಸರಿಸಿಲ್ಲ. ಗುರುವಾರ ಸರಿಯಾದ ದಾಖಲೆಗಳನ್ನು ಒದಗಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ದಾಖಲೆಗಳನ್ನು ಒದಗಿಸದಿದ್ದರೆ ಹಣವನ್ನು ಖಜಾನೆಗೆ ಜಮಾ ಮಾಡಲಾಗುವುದು’ ಎಂದು ಜಿಲ್ಲಾ ಚುನಾವಣಾಧಿಕಾರಿ ಎಚ್.ಆರ್.ಮಹಾದೇವ ತಿಳಿಸಿದ್ದಾರೆ.