ಈಗಾಗಲೇ ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ದೇವನಹಳ್ಳಿ, ವಿಜಯಪುರ, ಯಶವಂತಪುರ ಮಂಡಿಗಳಿಗೆ ತೆರಳಿ ವರ್ತಕರನ್ನು ಭೇಟಿ ನೀಡಿ, ಪರಿಷೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದ್ದು, ಈ ಸಲ 100ಕ್ಕೂ ಹೆಚ್ಚು ವ್ಯಾಪಾರಿಗಳು ಆಗಮಿಸಬಹುದೆಂದು ನಿರೀಕ್ಷಿಸಲಾಗಿದೆ. ಇದರ ಜೊತೆಗೆ ಗೃಹೋಪಯೋಗಿ ವಸ್ತುಗಳು, ಅಲಂಕಾರಿಕ ವಸ್ತುಗಳು, ತಿಂಡಿ-ತಿನಿಸುಗಳು. ಮಕ್ಕಳ ಆಟಿಕೆಗಳು ಸೇರಿದಂತೆ ವಿವಿಧ ಮಳಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.