ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಡಿಸಿಸಿ ಬ್ಯಾಂಕಿನ ₹123 ಕೋಟಿ ಸಾಲ ಮನ್ನಾ’

Last Updated 9 ಮಾರ್ಚ್ 2018, 9:36 IST
ಅಕ್ಷರ ಗಾತ್ರ

ಘಟಪ್ರಭಾ: ‘ಬಿಡಿಸಿಸಿ ಬ್ಯಾಂಕ್‌ನ ಗೋಕಾಕ ತಾಲ್ಲೂಕಿನ 40,222 ರೈತರಿಗೆ ಇದುವರೆಗೆ ₹165 ಕೋಟಿ ಸಾಲ ವಿತರಿಸಲಾಗಿದ್ದು, ಈ ಪೈಕಿ ₹123 ಕೋಟಿ ಸಾಲ ಮನ್ನಾ ಮಾಡಲಾಗಿದೆ’ ಎಂದು ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ಅರಭಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಸಭಾಭವನ ಹಾಗೂ ಗೋದಾಮು ಉದ್ಘಾಟಿಸಿ ಮಾತನಾಡಿದರು.

‘ಪ್ರಗತಿಯಲ್ಲಿ ನಮ್ಮ ಬ್ಯಾಂಕು ದೇಶದಲ್ಲಿಯೇ ಎರಡನೇ ಸ್ಥಾನ ಹೊಂದಿದೆ. ಇದುವರೆಗೆ 3.45 ಲಕ್ಷ ರೈತರಿಗೆ ₹1,538 ಕೋಟಿ ಸಾಲ ವಿತರಿಸಲಾಗಿದೆ. ಈ ಪೈಕಿ ₹1,009 ಕೋಟಿ ಸಾಲಮನ್ನಾ ಮಾಡಲಾಗಿದೆ’ ಎಂದರು.

ಶಾಸಕ ಬಾಲಚಂದ್ರ ಜಾರಕಿಹೊಳಿ, ‘ಅರಭಾವಿ ಕ್ಷೇತ್ರದ ಮತದಾರರನ್ನು ಪಡೆದಿರುವುದು ನನ್ನ ಭಾಗ್ಯ' ಎಂದರು.

ಪಿಕೆಪಿಎಸ್‌ನಿಂದ ರೈತರಿಗೆ ಟ್ರ್ಯಾಕ್ಟರ್‌ಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT