ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳನೋಟ| ಅತಿವೃಷ್ಟಿಯಾದರೂ ಬಾಗಲಕೋಟೆಯಲ್ಲಿ ಕುಸಿದ ಅಂತರ್ಜಲ ಮಟ್ಟ!

Last Updated 1 ಜನವರಿ 2022, 19:22 IST
ಅಕ್ಷರ ಗಾತ್ರ

ಬಾಗಲಕೋಟೆ: ಈ ವರ್ಷ ರಾಜ್ಯದ ಹಲವು ಜಿಲ್ಲೆಗಳು ಅತಿವೃಷ್ಟಿ ಹಾಗೂ ಪ್ರವಾಹದ ಸಂಕಷ್ಟ ಎದುರಿಸಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ಮಾತ್ರ ಅಂತರ್ಜಲ ಮಟ್ಟ ಇಳಿಕೆಯಾಗಿದೆ.

2020ರ ನವೆಂಬರ್‌ನಿಂದ 2021ರ ನವೆಂಬರ್ ಅವಧಿಯಲ್ಲಿ ಅಂತರ್ಜಲ ಮಟ್ಟ ಜಿಲ್ಲೆಯಲ್ಲಿ ಸರಾಸರಿ 1.20 ಮೀಟರ್ ಇಳಿಕೆಯಾಗಿದೆ ಎಂದು ಹಿರಿಯ ಭೂ ವಿಜ್ಞಾನಿ ಮಹೇಶ ಬಿರಾಜನವರ ಹೇಳುತ್ತಾರೆ.

‘ಮಳೆ ಹೆಚ್ಚು ಆಗಿದೆ ಎಂದರೆ ಅಂತರ್ಜಲ ಮಟ್ಟ ಹೆಚ್ಚಾಗಬೇಕಿದೆ ಎಂದೇನೂ ಇಲ್ಲ.ನಮ್ಮಲ್ಲಿ ಬಿದ್ದ ಮಳೆಯ ನೀರನ್ನು ಹಿಡಿದಿಡುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿಲ್ಲ. ಜಿಲ್ಲೆಯಲ್ಲಿ ನದಿಗಳ ಪಾತ್ರ ಇಲ್ಲವೇ ಆಲಮಟ್ಟಿ ಜಲಾಶಯದ ಹಿನ್ನೀರಿನ ಪಕ್ಕದಲ್ಲಿ ಮಾತ್ರ ಒಂದಷ್ಟು ಅಂತರ್ಜಲ ಮಟ್ಟ ಹೆಚ್ಚುತ್ತದೆ. ಅದು ಕೂಡ 5 ಕಿ.ಮೀನಷ್ಟು ಸುತ್ತಳತೆಯಲ್ಲಿ ಅಂತರ್ಜಲ ಹೆಚ್ಚಬಹುದು’ ಎಂದು ಮಾಹಿತಿ ನೀಡಿದರು.

ಬಾದಾಮಿ ತಾಲ್ಲೂಕಿನಲ್ಲಿ 600 ಅಡಿಯವರೆಗೆ ಕೊರೆಸಿದರೆ ಮಾತ್ರ ಒಂದಷ್ಟು ನೀರಿನ ಪಸೆ ಕಾಣಸಿಗುತ್ತದೆ. ಅಲ್ಲಿ ಅಂತರ್ಜಲ ಬಳಕೆ ಅತಿಯಾದ ಕಾರಣ ಕೊಳವೆ ಬಾವಿ ಕೊರೆಸಲು ಅನುಮತಿ ಕಡ್ಡಾಯ. ಇನ್ನು ಹುನಗುಂದ ತಾಲ್ಲೂಕಿನಲ್ಲಿ ಗ್ರಾನೈಟ್ ಗಣಿಗಳಿರುವ ಕಾರಣ ನೀರಿನಲ್ಲಿ ಫ್ಲೋರೈಡ್‌ ಅಂಶ ಸಾಮಾನ್ಯ.

‘ಕುಡಿಯಲು ನೀರು ಯೋಗ್ಯವಿಲ್ಲದ ಕಡೆ ಬಹುಗ್ರಾಮ ಯೋಜನೆ (ಎಂವಿಎಸ್) ಹಾಗೂ ಜಲಜೀವನ ಮಿಷನ್‌ನ ಜಲಧಾರೆ ಮೂಲಕ ಆಲಮಟ್ಟಿ ಜಲಾಶಯದ ಹಿನ್ನೀರು ಪ್ರದೇಶದ ಮನೆಗಳಿಗೆ ನೀರು ಪೂರೈಸುತ್ತಿದ್ದೇವೆ’ ಎಂದು ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕುಡಿಯುವ ನೀರು ವಿಭಾಗದ ಅಧಿಕಾರಿ ಶ್ರೀನಿವಾಸ ಹೇಳುತ್ತಾರೆ.

ಉಳಿದಂತೆ ಉತ್ತರ ಕರ್ನಾಟಕದ ಬೆಳಗಾವಿ, ಗದಗ, ಹಾವೇರಿ, ಧಾರವಾಡ ಮತ್ತಿತರ ಜಿಲ್ಲೆಗಳಲ್ಲಿ ಇಂತಹ ಸಮಸ್ಯೆ ಕಂಡುಬಂದಿಲ್ಲ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT