<p>ರಾಣೆಬೆನ್ನೂರು: ಇತ್ತೀಚೆಗೆ ಭೂಮಿಗೆ ರಾಸಾಯನಿಕ ಗೊಬ್ಬರ ಔಷಧ ಹಾಗೂ ಪ್ಲಾಸ್ಟಿಕ್ ಮಿಶ್ರಣ ಆಗುತ್ತಿರುವುದರಿಂದ ಭೂಮಿ ವಿಷಕಾರಿಯಾಗಿ ಬದಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಭೂಮಿಯನ್ನು ಕಾಪಾಡಲು ಮುಂದಾಗಬೇಕು ಎಂದು ಆರ್ಟಿಇಎಸ್ ಮಹಾವಿದ್ಯಾಲಯದ ಕಾಲೇಜಿನ ಪ್ರೊ.ಸಿ.ಎನ್. ಪೂಜಾರ ಹೇಳಿದರು.</p>.<p>ಇಲ್ಲಿನ ಕೆಎಲ್ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ವಿಶ್ವ ಭೂಮಿದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಆಧುನಿಕತೆಯ ಹೆಸರಿನಲ್ಲಿ ಕಾರ್ಖಾನೆಗಳು ಬಿಡುವ ನಾನಾ ವಿಧದ ತ್ಯಾಜ್ಯ ನಾಶವಾಗದ ಪ್ಲಾಸ್ಟಿಕ್ ತ್ಯಾಜ್ಯ ಮಿಶ್ರಣ ಆಗುವುದರಿಂದ ಭೂಮಿ ವಿಷಕಾರಿಯಾಗುತ್ತಿದೆ. ಯುವಕರು ಭೂಮಿಯ ಶುದ್ದತೆ, ಪರಿಸರ ನಿರ್ಮಾಣ ಹಾಗೂ ಭೂಮಿಗೆ ವಿಷಕಾರಿ ವಸ್ತುಗಳನ್ನು ಸೇರಿಸದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.</p>.<p>ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಎ. ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಸಾಯಿಲತಾ ಮಡಿವಾಳರ, ಪ್ರೊ. ನಾಗರಾಜ ಗವಿಯಪ್ಪನವರ, ಪ್ರೊ. ಚನಬಸಪ್ಪ ಮಾಳಿ ಪ್ರೊ. ಎಂ. ಎನ್. ಸೂರಣಗಿ, ಪ್ರೊ. ಗಣೇಶ ಅಂಗಡಿ, ನಿಶಾ ಕೆ. ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-22-1704124787</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ಇತ್ತೀಚೆಗೆ ಭೂಮಿಗೆ ರಾಸಾಯನಿಕ ಗೊಬ್ಬರ ಔಷಧ ಹಾಗೂ ಪ್ಲಾಸ್ಟಿಕ್ ಮಿಶ್ರಣ ಆಗುತ್ತಿರುವುದರಿಂದ ಭೂಮಿ ವಿಷಕಾರಿಯಾಗಿ ಬದಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಭೂಮಿಯನ್ನು ಕಾಪಾಡಲು ಮುಂದಾಗಬೇಕು ಎಂದು ಆರ್ಟಿಇಎಸ್ ಮಹಾವಿದ್ಯಾಲಯದ ಕಾಲೇಜಿನ ಪ್ರೊ.ಸಿ.ಎನ್. ಪೂಜಾರ ಹೇಳಿದರು.</p>.<p>ಇಲ್ಲಿನ ಕೆಎಲ್ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ವಿಶ್ವ ಭೂಮಿದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಆಧುನಿಕತೆಯ ಹೆಸರಿನಲ್ಲಿ ಕಾರ್ಖಾನೆಗಳು ಬಿಡುವ ನಾನಾ ವಿಧದ ತ್ಯಾಜ್ಯ ನಾಶವಾಗದ ಪ್ಲಾಸ್ಟಿಕ್ ತ್ಯಾಜ್ಯ ಮಿಶ್ರಣ ಆಗುವುದರಿಂದ ಭೂಮಿ ವಿಷಕಾರಿಯಾಗುತ್ತಿದೆ. ಯುವಕರು ಭೂಮಿಯ ಶುದ್ದತೆ, ಪರಿಸರ ನಿರ್ಮಾಣ ಹಾಗೂ ಭೂಮಿಗೆ ವಿಷಕಾರಿ ವಸ್ತುಗಳನ್ನು ಸೇರಿಸದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.</p>.<p>ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಎ. ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಸಾಯಿಲತಾ ಮಡಿವಾಳರ, ಪ್ರೊ. ನಾಗರಾಜ ಗವಿಯಪ್ಪನವರ, ಪ್ರೊ. ಚನಬಸಪ್ಪ ಮಾಳಿ ಪ್ರೊ. ಎಂ. ಎನ್. ಸೂರಣಗಿ, ಪ್ರೊ. ಗಣೇಶ ಅಂಗಡಿ, ನಿಶಾ ಕೆ. ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-22-1704124787</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>