ನಗರದ ಗಾಂಧಿ ಚೌಕ, ಗಂಗಾತಾಯಿ ದೇಗುಲ, ದರ್ಗಾದ ಬಳಿ ಕರಗಕ್ಕೆ ಪೂಜೆ ಸಲ್ಲಿಸಲಾಯಿತು. ಎಲ್ಲಮ್ಮ ತಾಯಿ ದೇವಾಲಯ, ಗುರಪ್ಪನಮಠದಿಂದ ಬಸ್ನಿಲ್ದಾಣ, ಏಳು ಸುತ್ತಿನ ಕೋಟೆ, ಸತ್ಯಮ್ಮ ತಾಯಿ ಕಾಲೊನಿ, ಶಿವಗಣೇಶ್ ಸರ್ಕಲ್, ಶಿಡ್ಲಘಟ್ಟ ಕ್ರಾಸ್, ಬಸವೇಶ್ವರ ನಗರ ಸೇರಿದಂತೆ ಪಟ್ಟಣದಾದ್ಯಂತ ಸಂಚರಿಸಿ ಸ್ಥಳೀಯ ನಿವಾಸಿಗಳಿಂದ ಪೂಜೆ ಸ್ವೀಕರಿಸಲಾಯಿತು. ಬೆಳಿಗ್ಗೆ 8ಕ್ಕೆ ದೇವಾಲಯಕ್ಕೆ ಕರಗ ವಾಪಸಾಯಿತು.