ಕಾಂಗ್ರೆಸ್ ಸರ್ಕಾರವು ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಟ್ಟಿತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಸಿದ ಬೆನ್ನಲ್ಲೇ, ಮೋದಿ ಅವರ ಸರ್ಕಾರದ ಅವಧಿಯಲ್ಲಿ ಚೀನಾವು ಅರುಣಾಚಲ ಪ್ರದೇಶದ ಎಷ್ಟು ಭಾಗವನ್ನು ಅತಿಕ್ರಮಿಸಿದೆ ಎಂಬುದೂ ಚರ್ಚೆಗೆ ಬಂದಿದೆ. ಚೀನಾಕ್ಕೆ ಒಂದಿನಿತೂ ಜಾಗವನ್ನೂ ಬಿಟ್ಟುಕೊಟ್ಟಿಲ್ಲ ಎಂದು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಹಲವು ವರ್ಷಗಳಿಂದ ಹೇಳುತ್ತಲೇ ಇದೆ. ಆದರೆ ಚೀನಾವು ಭಾರತದ ನೆಲದಲ್ಲಿ ರಸ್ತೆ, ಗಡಿಠಾಣೆ, ಹಳ್ಳಿಗಳನ್ನು ನಿರ್ಮಿಸಿದೆ ಎಂಬುದನ್ನು ಉಪಗ್ರಹ ಚಿತ್ರಗಳು ತೋರಿಸುತ್ತವೆ