ಮಳೆಯ ಋತು ಸರಿದ ಮೇಲೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ‘ಮೊಂಥಾ’ ಚಂಡಮಾರುತವು, ಪೂರ್ವ ಕರಾವಳಿಯ ಹಲವು ರಾಜ್ಯಗಳಲ್ಲಿ ಭಾರಿ ಮಳೆಗೆ ಕಾರಣವಾಗಿದೆ. ಚಂಡಮಾರುತವು ಆಂಧ್ರ ಪ್ರದೇಶದ ಕರಾವಳಿಗೆ ಅಪ್ಪಳಿಸಿದ್ದು, ನೆರೆಯ ಒಡಿಶಾದಲ್ಲಿ ಹೆಚ್ಚಿನ ಪರಿಣಾಮ ಬೀರುವ ಅಂದಾಜು ಇದೆ. ತಮಿಳುನಾಡು ಮತ್ತು ಜಾರ್ಖಂಡ್ ರಾಜ್ಯಗಳೂ ಇದರ ಪರಿಣಾಮಕ್ಕೆ ಒಳಪಟ್ಟಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಆಧಾರದಲ್ಲಿ ರಾಜ್ಯ ಸರ್ಕಾರಗಳು ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ವ್ಯಾಪಕ ಸಿದ್ಧತೆ ಮಾಡಿಕೊಂಡಿವೆ.
ಮೊಂಥಾ ಚಂಡಮಾರುತದ ಕಾರಣಕ್ಕೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಸಮುದ್ರ ಪ್ರಕ್ಷುಬ್ದಗೊಂಡಿದೆ