ಉತ್ತರ ಪ್ರದೇಶದಲ್ಲಿ ಮಹಾಕುಂಭ ಮೇಳ ಇಂದಿನಿಂದ ನಡೆಯಲಿದೆ. 12 ವರ್ಷಗಳಿಗೊಮ್ಮೆ ಬರುವ ಈ ಮೇಳಕ್ಕೆ ಪೌರಾಣಿಕ ಮತ್ತು ಸಾಂಸ್ಕೃತಿಕ ಮಹತ್ವ ಇದೆ. ಹಾಗಾಗಿ, ಇದನ್ನು ಭಾರತದ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವ ಪ್ರವಾಸೋದ್ಯಮದ ಚಟುವಟಿಕೆಯನ್ನಾಗಿಯೂ ರೂಪಿಸಬೇಕೆಂದು ರಾಜ್ಯ ಸರ್ಕಾರ ಹಲವು ವ್ಯವಸ್ಥೆ ಮಾಡಿಕೊಂಡಿದೆ. ಈ ಬಾರಿಯ ಮೇಳದಲ್ಲಿ ಎಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನವನ್ನೂ ಬಳಸಿಕೊಂಡಿರುವುದು ವಿಶೇಷ