ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಆಳ-ಅಗಲ | ಸಿಸೇರಿಯನ್‌: ಹೆಚ್ಚಳ ತಂದ ಕಳವಳ

ಭಾರತದಲ್ಲಿ ದಕ್ಷಿಣ ರಾಜ್ಯಗಳಲ್ಲಿ ಹೆಚ್ಚು
Published : 17 ಜನವರಿ 2025, 0:30 IST
Last Updated : 17 ಜನವರಿ 2025, 0:30 IST
ಫಾಲೋ ಮಾಡಿ
Comments
ತಾಯಿ ಮತ್ತು ಮಗುವಿನ ಪ್ರಾಣ ರಕ್ಷಣೆಯಲ್ಲಿ ಸಿಸೇರಿಯನ್ ಪಾತ್ರ ಬಹಳ ಮುಖ್ಯವಾದದ್ದು. ಆದರೆ, ಅದನ್ನು ಬಳಸುವ ರೀತಿಯಲ್ಲಿ ವ್ಯತ್ಯಾಸಗಳಾಗುತ್ತಿವೆ. ಜಾಗತಿಕ, ದೇಶ, ರಾಜ್ಯಮಟ್ಟದಲ್ಲಿ ಸಿಸೇರಿಯನ್‌ ಹೆರಿಗೆಗಳ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಅದೀಗ ಅತ್ಯಂತ ಸಹಜ ಶಸ್ತ್ರಚಿಕಿತ್ಸೆಯಾಗಿ ಮಾರ್ಪಟ್ಟಿದೆ ಎಂದು ಹೇಳುತ್ತವೆ ಅಧ್ಯಯನ ವರದಿಗಳು. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ತಾಯಿ ಮತ್ತು ಮಗುವಿನ ಪ್ರಾಣ ಉಳಿಸುವುದಕ್ಕಾಗಿ ಸಿಸೇರಿಯನ್‌ ಮೂಲಕ ಹೆರಿಗೆ ಮಾಡಿಸಲಾಗುತ್ತದೆ. ಆದರೆ ಈಗ ವೈದ್ಯಕೀಯ ಅಲ್ಲದ ಕಾರಣಗಳಿಗೂ ಸಿಸೇರಿಯನ್‌ ಮೂಲಕ ಹೆರಿಗೆ ಮಾಡಿಸಲಾಗುತ್ತಿದೆ. ಅನಗತ್ಯವಾಗಿ ಸಿಸೇರಿಯನ್‌ ಮೂಲಕ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಕಳವಳವೂ ವ್ಯಕ್ತವಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT