ಆರೋಗ್ಯ ಮತ್ತು ಜೀವ ವಿಮಾ ಕಂತುಗಳ ಮೇಲೆ ಜಿಎಸ್ಟಿ ವಿಧಿಸುವುದರ ವಿರುದ್ಧ ಕೇಳಿ ಬಂದಿರುವ ಮಾತುಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿದಂತೆ ಕಾಣುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸುವುದಕ್ಕಾಗಿ ಸಚಿವರ ತಂಡವನ್ನು ರಚಿಸಿದೆ. ತಂಡವು ವಸ್ತುಸ್ಥಿತಿ ಅಧ್ಯಯನ ಮಾಡಿ ಜಿಎಸ್ಟಿ ಕೌನ್ಸಿಲ್ಗೆ ವರದಿ ನೀಡಲಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ಮಂಡಳಿಯು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಜಿಎಸ್ಟಿಯನ್ನು ಪೂರ್ಣವಾಗಿ ರದ್ದುಪಡಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರ ಪರಿಗಣಿಸಿದಂತೆ ಕಾಣುತ್ತಿಲ್ಲ. ತೆರಿಗೆ ಕಡಿತಕ್ಕೆ ಮಾತ್ರ ಒಲವು ತೋರಿದಂತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.