
ಕರ್ನಾಟಕದ ಪೊಲೀಸರು ತಮ್ಮ ದಕ್ಷತೆ ಮತ್ತು ವೃತ್ತಿಪರತೆಗೆ ದೇಶದಲ್ಲಿಯೇ ಹೆಸರಾಗಿದ್ದರು. ಕಾನೂನು ಮೀರಿದವರನ್ನು ಅತ್ಯಂತ ಕ್ಷಿಪ್ರವಾಗಿ ಬಂಧಿಸಿ ಕಟಕಟೆಯಲ್ಲಿ ನಿಲ್ಲಿಸುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಪೊಲೀಸರೇ ಕಟಕಟೆಯಲ್ಲಿ ನಿಲ್ಲುತ್ತಿದ್ದಾರೆ; ಅತ್ಯಾಚಾರ, ಸುಲಿಗೆ, ದರೋಡೆ, ಬೆದರಿಕೆ ಮುಂತಾದ ಆರೋಪಗಳಿಂದ ಪೊಲೀಸರು ಅಮಾನತುಗೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಅನ್ಯಾಯಕ್ಕೆ ಒಳಗಾದವರು ರಕ್ಷಣೆಗಾಗಿ ಪೊಲೀಸರ ಬಳಿಗೆ ಬರುತ್ತಿದ್ದರು. ಅಂಥ ಪೊಲೀಸರೇ ಈಗ ಆರೋಪಿಗಳ ಸ್ಥಾನದಲ್ಲಿ ನಿಲ್ಲುತ್ತಿರುವ ಪ್ರವೃತ್ತಿ ಕಂಡು ಬರುತ್ತಿದೆ
ಅಪರಾಧ ಕೃತ್ಯಗಳಲ್ಲಿ ಪೊಲೀಸರು ಭಾಗಿಯಾದರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಎಫ್ಐಆರ್ ಆದ ತಕ್ಷಣವೇ ಸೇವೆಯಿಂದ ವಜಾ ಮಾಡುತ್ತಿದ್ದೇವೆ. ಇಬ್ಬರನ್ನು ಈಗಾಗಲೇ ವಜಾ ಮಾಡಿದ್ದೇವೆಜಿ.ಪರಮೇಶ್ವರ, ಗೃಹ ಸಚಿವ
ಕಾರು ಹತ್ತಿಸಲು ಯತ್ನಿಸಿದ್ದ ಡಿವೈಎಸ್ಪಿ
ಅಮಾನತು, ಬಂಧನಕ್ಕೆ ಒಳಗಾದವರು
ಅಪರಾಧ ಕೃತ್ಯಗಳಲ್ಲಿ ಪೊಲೀಸರು ಭಾಗಿಯಾದರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಎಫ್ಐಆರ್ ಆದ ತಕ್ಷಣವೇ ಸೇವೆಯಿಂದ ವಜಾ ಮಾಡುತ್ತಿದ್ದೇವೆ. ಇಬ್ಬರನ್ನು ಈಗಾಗಲೇ ವಜಾ ಮಾಡಿದ್ದೇವೆ–ಜಿ.ಪರಮೇಶ್ವರ, ಗೃಹ ಸಚಿವ

ಜಿ.ಪರಮೇಶ್ವರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.