ನಕ್ಸಲ್ ಮುಖಂಡ ನಂಬಾಲ ಕೇಶವರಾವ್ ಅಲಿಯಾಸ್ ಬಸವರಾಜು ಅವರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದನ್ನು ಐತಿಹಾಸಿಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಣ್ಣಿಸಿದ್ದಾರೆ. ‘ನಕ್ಸಲ್ ಮುಕ್ತ ಭಾರತ’ದ ತಮ್ಮ ಗುರಿಯಲ್ಲಿ ಇದೊಂದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ. 2026ರ ಮಾರ್ಚ್ ಒಳಗೆ ‘ಎಡಪಂಥೀಯ ತೀವ್ರಗಾಮಿ’ಗಳನ್ನು ನಿರ್ಮೂಲನೆ ಮಾಡಬೇಕು ಎನ್ನುವುದು ಕೇಂದ್ರದ ಸಂಕಲ್ಪ. ಈ ದಿಸೆಯಲ್ಲಿ ಕೇಂದ್ರ ಸರ್ಕಾರವು ಈಗಾಗಲೇ ಸಾಕಷ್ಟು ಪ್ರಗತಿ ಸಾಧಿಸಿದೆ ಎನ್ನಲಾಗುತ್ತಿದೆ. ಒಂದೆಡೆ ಭದ್ರತಾ ಪಡೆಗಳ ತೀವ್ರ ಕ್ರಮ, ಅಭಿವೃದ್ಧಿ ಕಾರ್ಯಕ್ರಮಗಳು; ಮತ್ತೊಂದೆಡೆ ಹಿರಿಯ ನಾಯಕರ ಕೊರತೆ, ಕ್ಷೀಣಿಸುತ್ತಿರುವ ಜನಬೆಂಬಲದಿಂದ ನಕ್ಸಲ್ ಚಳವಳಿಯ ಬಲ ತೀವ್ರವಾಗಿ ಕುಗ್ಗಿದ್ದು, ಅದರ ಅಂತ್ಯ ಸಮೀಪಿಸಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಕೊಡಗಿನಲ್ಲಿ ನಕ್ಸಲ್ ನಿಗ್ರಹ ಪಡೆಯ (ಎಎನ್ಎಫ್) ಕಾರ್ಯಾಚರಣೆ
ಆಧಾರ: ಪಿಟಿಐ, ಪ್ರೆಸ್ ಇನ್ಫರ್ಮೇಷನ್ ಬ್ಯೂರೊ, ಸಂಸತ್ ಟಿವಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.