ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧ ಸಜ್ಜುಗೊಂಡಿದೆ. ರಾಜ್ಯದ ಉತ್ತರದ ಜಿಲ್ಲೆಗಳು, ಅಲ್ಲಿನ ಜನರ ಸಂಕಷ್ಟಗಳ ಬಗ್ಗೆ ಚರ್ಚಿಸುವ ಉದ್ದೇಶದಿಂದ ಬೆಳಗಾವಿಯಲ್ಲಿ ಪ್ರತಿ ವರ್ಷ ಅಧಿವೇಶನ ನಡೆಸಲಾಗುತ್ತದೆ. ಆದರೆ, ಪ್ರತಿ ಬಾರಿಯೂ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಗ್ವಾದ, ಕಲಹಗಳಲ್ಲೇ ಅಧಿವೇಶನ ಮುಗಿದು ಹೋಗುತ್ತಿದೆ. ಈ ಬಾರಿಯಾದರೂ ಹಲವು ವರ್ಷಗಳಿಂದ ಪರಿಹಾರವಾಗದೇ ಉಳಿದಿರುವ ತಮ್ಮ ಸಮಸ್ಯೆಗಳು, ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ನಡೆಯಲಿ ಎಂಬುದು ಉತ್ತರ ಕರ್ನಾಟಕದ ಜಿಲ್ಲೆಗಳ ಜನರ ಆಶಯ.