ಶಿರೂರು ಭೂಕುಸಿತದ ದುಃಸ್ವಪ್ನ
2024ರ ಜುಲೈ 16 ರಂದು ಭೂಕುಸಿತ ದುರಂತ ಸಂಭವಿಸಿ 11 ಜನರು ಮೃತಪಟ್ಟಿದ್ದ ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಈಗಲೂ ಗುಡ್ಡವು ಅಪಾಯಕಾರಿ ಸ್ಥಿತಿಯಲ್ಲಿಯೇ ಇದೆ. ಅವಘಡ ನಡೆದರೂ ಭೂಕುಸಿತ ತಡೆಗೆ ಇಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ. ಈಚೆಗೆ ಮಳೆ ಸುರಿದ ಬಳಿಕ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಶಿರೂರಿನ 1.5 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ಮಾಡದಂತೆ ಪಕ್ಕದಲ್ಲಿ ಹರಿಯುವ ಗಂಗಾವಳಿ ನದಿಯಲ್ಲಿ ಮೀನುಗಾರಿಕೆ ಚಟುವಟಿಕೆ ನಡೆಸದಂತೆ ನಿಷೇಧ ಹೊರಡಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ.