ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) ಪದವಿ ಕೋರ್ಸ್ಗಳ ಒಂಬತ್ತು ವಿಷಯಗಳಿಗೆ ಸಿದ್ಧಪಡಿಸಿರುವ ಕಲಿಕಾ ಫಲಿತಾಂಶ ಆಧಾರಿತ ಪಠ್ಯಕ್ರಮ ಚೌಕಟ್ಟಿನ (ಎಲ್ಒಸಿಎಫ್) ಕರಡು ವಿವಾದಕ್ಕೆ ಗುರಿಯಾಗಿದೆ. ಪಠ್ಯಗಳಲ್ಲಿ ಭಾರತೀಯ ಜ್ಞಾನ ವ್ಯವಸ್ಥೆಯನ್ನು ಅಳವಡಿಸುವ ಆಶಯದಿಂದ ಎಲ್ಒಸಿಎಫ್ ರೂಪಿಸಲಾಗಿದೆ ಎನ್ನುವುದು ಯುಜಿಸಿ ಪ್ರತಿಪಾದನೆ. ಯುಜಿಸಿಯ ಈ ಪ್ರಯತ್ನಕ್ಕೆ ಕರ್ನಾಟಕ, ಕೇರಳ ಸೇರಿದಂತೆ ಕೆಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಶಿಕ್ಷಣದ ಮೂಲಕ ಪಠ್ಯಪುಸ್ತಕಗಳಲ್ಲಿ ಆರ್ಎಸ್ಎಸ್ ಕಾರ್ಯಸೂಚಿಯನ್ನು ಜಾರಿಗೆ ತರುವ ಮೂಲಕ ಶಿಕ್ಷಣವನ್ನು ಕೇಸರೀಕರಣಗೊಳಿಸಲು ಮುಂದಾಗಿದೆ ಎನ್ನುವ ಟೀಕೆ ವ್ಯಕ್ತವಾಗಿದೆ.