ಬೇಸಿಗೆಯಲ್ಲಿ ಹನಿ ಹನಿಗೂ ಹಾಹಾಕಾರ, ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ
ಫಾಲೋ ಮಾಡಿ
ಜೆ.ಹರ್ಷ
Published 14 ನವೆಂಬರ್ 2025, 19:30 IST
Last Updated 14 ನವೆಂಬರ್ 2025, 19:30 IST
Comments
ಭಾರತದ ನಗರ ಪ್ರದೇಶಗಳ ಜಲ ಬಿಕ್ಕಟ್ಟು, ವೈಪರೀತ್ಯಗಳಿಗೆ ಮೂಲ ಹಾಗೂ ಅಂತಿಮ ಪರಿಹಾರ ಸಿಗಬೇಕು ಎಂದರೆ, ದೇಶದ ಅನೇಕ ರಾಜ್ಯಗಳಲ್ಲಿ ಒಂದು ನಗರದ ಬೆಳವಣಿಗೆಗೆ ಕೊಡುತ್ತಿರುವ ಅಪರಿಮಿತ ಪ್ರಾಮುಖ್ಯ ಮತ್ತು ಚಿಕ್ಕ ಚಿಕ್ಕ ಪಟ್ಟಣಗಳ ಅಭಿವೃದ್ಧಿಯ ನಿರ್ಲಕ್ಷ್ಯ- ಇವೆರಡಕ್ಕೂ ಕಡಿವಾಣ ಬೀಳಬೇಕು. ಒಂದೇ ನಗರಕ್ಕೆ ಹರಿದುಹೋಗುತ್ತಿರುವ ಅಪರಿಮಿತ ಹೂಡಿಕೆ, ಶ್ರೀಮಂತಿಕೆಯ ಕೇಂದ್ರೀಕರಣ ಮತ್ತು ಇದರ ಕಾರಣವಾಗಿ ಮಹಾನಗರಗಳ ಅನಿಯಂತ್ರಿತ 360 ಡಿಗ್ರಿಯ ವಿಸ್ತರಣೆ- ಇವೆಲ್ಲದರ ಕಡಿವಾಣವೇ ಮಹಾನಗರಗಳ ಮಹಾವೈಪರೀತ್ಯಗಳಾದ ಬರ/ಪ್ರವಾಹಗಳಿಗೆ ನೀಡಬಹುದಾದ ಮೂಲ ಚಿಕಿತ್ಸೆ