<p><strong>ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ</strong></p><p>ಬೇರೆ ಭಾಷೆಗಳಿಂದ ಇಂಗ್ಲಿಷ್ಗೆ ಭಾಷಾಂತರ ಮಾಡಲಾದ ಸೃಜನಶೀಲ ಸಾಹಿತ್ಯ ಅಥವಾ ಸಣ್ಣ ಕಥೆಗಳಿಗೆ ಕೊಡಮಾಡುವ ಜಗತ್ತಿನ ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿ ಇದು. ಬ್ರಿಟನ್ನ ಬೂಕರ್ ಪ್ರಶಸ್ತಿ ಫೌಂಡೇಷನ್ ವಾರ್ಷಿಕವಾಗಿ ಈ ಪ್ರಶಸ್ತಿಯನ್ನು ನೀಡುತ್ತದೆ. ಬ್ರಿಟನ್ ಅಥವಾ ಐರ್ಲೆಂಡ್ನಲ್ಲಿ ಪ್ರಕಟವಾದ ಕೃತಿಗಳನ್ನು ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಈ ಪ್ರಶಸ್ತಿಯ ಬಹುಮಾನ ಮೊತ್ತ 50 ಸಾವಿರ ಪೌಂಡ್ (₹57.34 ಲಕ್ಷ). 2005ರಲ್ಲಿ ಈ ಪ್ರಶಸ್ತಿ ಆರಂಭಿಸಲಾಗಿತ್ತು. ಆಗ ಇದಕ್ಕೆ ಮ್ಯಾನ್ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಎಂದು ಹೆಸರಿಡಲಾಗಿತ್ತು. 2015ರಲ್ಲಿ ನಿಯಮ ಬದಲಾವಣೆ ಆದ ನಂತರ ಪ್ರಶಸ್ತಿ ಹೆಸರನ್ನು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಎಂದು ಬದಲಾಯಿಸಲಾಯಿತು.</p><p>ಬಾನು ಮುಷ್ತಾಕ್ ಅವರು ಈ ಪ್ರಶಸ್ತಿಗೆ ಭಾಜನರಾದ ಭಾರತದ ಎರಡನೇ ಲೇಖಕಿ. 2022ರಲ್ಲಿ ಗೀತಾಂಜಲಿ ಶ್ರೀ ಅವರ ‘ಟಾಂಬ್ ಆಫ್ ಸ್ಯಾಂಡ್’ (ಹಿಂದಿ ಕಾದಂಬರಿ) ಕೃತಿಗೆ ಈ ಪ್ರಶಸ್ತಿ ಬಂದಿತ್ತು. ದೀಪಾ ಭಾಸ್ತಿ ಅವರು ಈ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತದ ಮೊದಲ ಅನುವಾದಕಿ.</p><p>2013ನೇ ಸಾಲಿನಲ್ಲಿ ಕನ್ನಡದ ಯು.ಆರ್.ಅನಂತಮೂರ್ತಿ ಅವರು ಪ್ರಶಸ್ತಿಗಾಗಿ ನಾಮನಿರ್ದೇಶನಗೊಂಡಿದ್ದ ಲೇಖಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಆ ಪಟ್ಟಿಯಲ್ಲಿದ್ದ ದೇಶದ ಏಕೈಕ ಸಾಹಿತಿ ಅವರಾಗಿದ್ದರು. </p><p><strong>ಬೂಕರ್ ಪ್ರಶಸ್ತಿ</strong></p><p>ಬೂಕರ್ ಪ್ರಶಸ್ತಿ ಫೌಂಡೇಷನ್, ‘ಬೂಕರ್ ಪ್ರಶಸ್ತಿ’ ಎಂಬ ಹೆಸರಿನಲ್ಲಿ ಇಂಗ್ಲಿಷ್ ಕಾದಂಬರಿಗೆ ಪ್ರತಿ ವರ್ಷ ಪ್ರಶಸ್ತಿಯನ್ನು ಘೋಷಿಸುತ್ತದೆ. ಇದಕ್ಕೆ ಮೊದಲು ಮ್ಯಾನ್ ಬೂಕರ್ ಪ್ರಶಸ್ತಿ ಎಂಬ ಹೆಸರಿತ್ತು. ಬ್ರಿಟನ್ ಮತ್ತು ಐರ್ಲೆಂಡ್ನಲ್ಲಿ ಪ್ರಕಟಗೊಂಡ ಕೃತಿಗಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. 1969ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಏಳು ಮಂದಿಯನ್ನೊಳಗೊಂಡ ತೀರ್ಪುಗಾರರ ಸಮಿತಿ ಕೃತಿಯನ್ನು ಆಯ್ಕೆ ಮಾಡುತ್ತದೆ. ಈ ಪ್ರಶಸ್ತಿಯ ಬಹುಮಾನ ಮೊತ್ತ 50 ಸಾವಿರ ಪೌಂಡ್ (₹57.34 ಲಕ್ಷ ).</p><p>1997ರಲ್ಲಿ ಭಾರತದ ಅರುಂಧತಿ ರಾಯ್ (ಕೃತಿ: ಗಾಡ್ ಆಫ್ ಸ್ಮಾಲ್ ಥಿಂಗ್ಸ್ ), 2008ರಲ್ಲಿ ಅರವಿಂದ ಅಡಿಗ (ದಿ ವೈಟ್ ಟೈಗರ್) ಅವರು ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. </p><p>ಭಾರತ ಮೂಲದ ವಿ.ಎಸ್.ನೈಪಾಲ್ ಅವರು 1971ರಲ್ಲಿ (ಕೃತಿ:ಇನ್ ಎ ಫ್ರೀ ಸ್ಟೇಟ್) ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಅನಿವಾಸಿ ಭಾರತೀಯ ಸಲ್ಮಾನ್ ರಶ್ದಿ ಅವರ ‘ಮಿಡ್ನೈಟ್ಸ್ ಚಿಲ್ಡ್ರನ್’ ಕೃತಿಯು 1981ರಲ್ಲಿ ಬೂಕರ್ ಪ್ರಶಸ್ತಿಗೆ ಭಾಜನವಾಗಿತ್ತು. ಮತ್ತೊಬ್ಬ ಅನಿವಾಸಿ ಭಾರತೀಯ ಸಾಹಿತಿ ಕಿರಣ್ ದೇಸಾಯಿ (ಕೃತಿ: ದಿ ಇನ್ಹೆರಿಟೆನ್ಸ್ ಆಫ್ ಲಾಸ್) ಅವರು 2006ರಲ್ಲಿ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. </p>.Booker Prize: ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ.ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ Exclusive ಸಂದರ್ಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ</strong></p><p>ಬೇರೆ ಭಾಷೆಗಳಿಂದ ಇಂಗ್ಲಿಷ್ಗೆ ಭಾಷಾಂತರ ಮಾಡಲಾದ ಸೃಜನಶೀಲ ಸಾಹಿತ್ಯ ಅಥವಾ ಸಣ್ಣ ಕಥೆಗಳಿಗೆ ಕೊಡಮಾಡುವ ಜಗತ್ತಿನ ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿ ಇದು. ಬ್ರಿಟನ್ನ ಬೂಕರ್ ಪ್ರಶಸ್ತಿ ಫೌಂಡೇಷನ್ ವಾರ್ಷಿಕವಾಗಿ ಈ ಪ್ರಶಸ್ತಿಯನ್ನು ನೀಡುತ್ತದೆ. ಬ್ರಿಟನ್ ಅಥವಾ ಐರ್ಲೆಂಡ್ನಲ್ಲಿ ಪ್ರಕಟವಾದ ಕೃತಿಗಳನ್ನು ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಈ ಪ್ರಶಸ್ತಿಯ ಬಹುಮಾನ ಮೊತ್ತ 50 ಸಾವಿರ ಪೌಂಡ್ (₹57.34 ಲಕ್ಷ). 2005ರಲ್ಲಿ ಈ ಪ್ರಶಸ್ತಿ ಆರಂಭಿಸಲಾಗಿತ್ತು. ಆಗ ಇದಕ್ಕೆ ಮ್ಯಾನ್ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಎಂದು ಹೆಸರಿಡಲಾಗಿತ್ತು. 2015ರಲ್ಲಿ ನಿಯಮ ಬದಲಾವಣೆ ಆದ ನಂತರ ಪ್ರಶಸ್ತಿ ಹೆಸರನ್ನು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಎಂದು ಬದಲಾಯಿಸಲಾಯಿತು.</p><p>ಬಾನು ಮುಷ್ತಾಕ್ ಅವರು ಈ ಪ್ರಶಸ್ತಿಗೆ ಭಾಜನರಾದ ಭಾರತದ ಎರಡನೇ ಲೇಖಕಿ. 2022ರಲ್ಲಿ ಗೀತಾಂಜಲಿ ಶ್ರೀ ಅವರ ‘ಟಾಂಬ್ ಆಫ್ ಸ್ಯಾಂಡ್’ (ಹಿಂದಿ ಕಾದಂಬರಿ) ಕೃತಿಗೆ ಈ ಪ್ರಶಸ್ತಿ ಬಂದಿತ್ತು. ದೀಪಾ ಭಾಸ್ತಿ ಅವರು ಈ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತದ ಮೊದಲ ಅನುವಾದಕಿ.</p><p>2013ನೇ ಸಾಲಿನಲ್ಲಿ ಕನ್ನಡದ ಯು.ಆರ್.ಅನಂತಮೂರ್ತಿ ಅವರು ಪ್ರಶಸ್ತಿಗಾಗಿ ನಾಮನಿರ್ದೇಶನಗೊಂಡಿದ್ದ ಲೇಖಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಆ ಪಟ್ಟಿಯಲ್ಲಿದ್ದ ದೇಶದ ಏಕೈಕ ಸಾಹಿತಿ ಅವರಾಗಿದ್ದರು. </p><p><strong>ಬೂಕರ್ ಪ್ರಶಸ್ತಿ</strong></p><p>ಬೂಕರ್ ಪ್ರಶಸ್ತಿ ಫೌಂಡೇಷನ್, ‘ಬೂಕರ್ ಪ್ರಶಸ್ತಿ’ ಎಂಬ ಹೆಸರಿನಲ್ಲಿ ಇಂಗ್ಲಿಷ್ ಕಾದಂಬರಿಗೆ ಪ್ರತಿ ವರ್ಷ ಪ್ರಶಸ್ತಿಯನ್ನು ಘೋಷಿಸುತ್ತದೆ. ಇದಕ್ಕೆ ಮೊದಲು ಮ್ಯಾನ್ ಬೂಕರ್ ಪ್ರಶಸ್ತಿ ಎಂಬ ಹೆಸರಿತ್ತು. ಬ್ರಿಟನ್ ಮತ್ತು ಐರ್ಲೆಂಡ್ನಲ್ಲಿ ಪ್ರಕಟಗೊಂಡ ಕೃತಿಗಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. 1969ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಏಳು ಮಂದಿಯನ್ನೊಳಗೊಂಡ ತೀರ್ಪುಗಾರರ ಸಮಿತಿ ಕೃತಿಯನ್ನು ಆಯ್ಕೆ ಮಾಡುತ್ತದೆ. ಈ ಪ್ರಶಸ್ತಿಯ ಬಹುಮಾನ ಮೊತ್ತ 50 ಸಾವಿರ ಪೌಂಡ್ (₹57.34 ಲಕ್ಷ ).</p><p>1997ರಲ್ಲಿ ಭಾರತದ ಅರುಂಧತಿ ರಾಯ್ (ಕೃತಿ: ಗಾಡ್ ಆಫ್ ಸ್ಮಾಲ್ ಥಿಂಗ್ಸ್ ), 2008ರಲ್ಲಿ ಅರವಿಂದ ಅಡಿಗ (ದಿ ವೈಟ್ ಟೈಗರ್) ಅವರು ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. </p><p>ಭಾರತ ಮೂಲದ ವಿ.ಎಸ್.ನೈಪಾಲ್ ಅವರು 1971ರಲ್ಲಿ (ಕೃತಿ:ಇನ್ ಎ ಫ್ರೀ ಸ್ಟೇಟ್) ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಅನಿವಾಸಿ ಭಾರತೀಯ ಸಲ್ಮಾನ್ ರಶ್ದಿ ಅವರ ‘ಮಿಡ್ನೈಟ್ಸ್ ಚಿಲ್ಡ್ರನ್’ ಕೃತಿಯು 1981ರಲ್ಲಿ ಬೂಕರ್ ಪ್ರಶಸ್ತಿಗೆ ಭಾಜನವಾಗಿತ್ತು. ಮತ್ತೊಬ್ಬ ಅನಿವಾಸಿ ಭಾರತೀಯ ಸಾಹಿತಿ ಕಿರಣ್ ದೇಸಾಯಿ (ಕೃತಿ: ದಿ ಇನ್ಹೆರಿಟೆನ್ಸ್ ಆಫ್ ಲಾಸ್) ಅವರು 2006ರಲ್ಲಿ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. </p>.Booker Prize: ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ.ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ Exclusive ಸಂದರ್ಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>