ನವದೆಹಲಿ: ಮಣಿಪುರದಲ್ಲಿನ ಕ್ಷೋಭೆಯ ಕುರಿತು ಸಂಸತ್ತಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡಬೇಕು ಎಂಬ ಆಗ್ರಹವು ಸಂಸತ್ತಿನ ಮುಂಗಾರು ಅಧಿವೇಶನ ಸುಗಮವಾಗಿ ನಡೆಯುವುದಕ್ಕೆ ಅಡ್ಡಿಯಾಗಿದೆ. ಭಾರತ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟಕ್ಕೆ (I.N.D.I.A) ಸೇರಿದ ವಿಪಕ್ಷಗಳು ಕಲಾಪ ನಡೆಯಲು ಅವಕಾಶ ಮಾಡಿಕೊಡುತ್ತಿಲ್ಲ. ಇದರೊಂದಿಗೆ ಬುಧವಾರ ಸಂಸತ್ತಿನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಪ್ರಸ್ತಾಪವನ್ನು ಸ್ಪೀಕರ್ಗೆ ಒಪ್ಪಿಸಲಾಗಿದೆ. ಲೋಕಸಭಾಧ್ಯಕ್ಷರು ಅದನ್ನು ಸ್ವೀಕರಿಸಿ, ಚರ್ಚೆಗೆ ದಿನಾಂಕ ನಿಗದಿಪಡಿಸುವುದಾಗಿಯೂ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಅವಿಶ್ವಾಸ ನಿರ್ಣಯ ಅಥವಾ ಗೊತ್ತುವಳಿ - ಈ ಕುರಿತು ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳು ಇಲ್ಲಿವೆ:
1999ರ ಏಪ್ರಿಲ್ ತಿಂಗಳಲ್ಲಿ ಎನ್ಡಿಎ ಸರ್ಕಾರದ ನೇತೃತ್ವ ವಹಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಒಂದು ಮತದ ಅಂತರದಿಂದ (269-270) ಸೋತು, ಅವರ ಸರ್ಕಾರ ರಾಜೀನಾಮೆ ನೀಡಬೇಕಾಯಿತು.
2018ರಲ್ಲಿಯೂ ವಿಪಕ್ಷಗಳು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದವು ಮತ್ತು ಅದಕ್ಕೆ ಸೋಲಾಗಿತ್ತು.
ಸ್ವಾತಂತ್ರ್ಯ ಬಂದಂದಿನಿಂದ ಇದುವರೆಗೆ 27 ಬಾರಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲಾಗಿತ್ತು. 1963ರಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ವಿರುದ್ಧ ಮೊದಲ ಬಾರಿ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅತ್ಯಧಿಕ ಅವಿಶ್ವಾಸ ಗೊತ್ತುವಳಿ ಎದುರಿಸಿದವರು. ಅವರು 15 ಬಾರಿ ಎದುರಿಸಿದ್ದರೆ, ಲಾಲ್ ಬಹಾದುರ್ ಶಾಸ್ತ್ರಿ ಮತ್ತು ಪಿ.ವಿ.ನರಸಿಂಹ ರಾವ್ ತಲಾ ಮೂರು ಬಾರಿ ಅವಿಶ್ವಾಸ ಗೊತ್ತುವಳಿ ಎದುರಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.