<p>ದೇಶದಾದ್ಯಂತ ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ₹3 ಹಾಗೂ ಸಿಎನ್ಜಿ ದರದಲ್ಲಿ ₹2 ಏರಿಕೆಯಾಗಿದ್ದು, ಜನಸಾಮಾನ್ಯರ ಆರ್ಥಿಕ ಸ್ಥಿತಿಯ ಮೇಲೆ ಇದು ಗಂಭೀರ ಪರಿಣಾಮ ಬೀರಲಿದೆ. ಕೇವಲ ವಾಹನ ಸವಾರರಿಗಷ್ಟೇ ಅಲ್ಲದೆ, ಸರಕು ಸಾಗಣೆ ವೆಚ್ಚ ಹೆಚ್ಚಾಗುವುದರಿಂದ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರುವ ಭೀತಿ ಎದುರಾಗಿದೆ. ನಾಲ್ಕು ವರ್ಷಗಳ ನಂತರ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಈ ಕ್ರಮವು ಕೃಷಿ, ಪ್ರವಾಸೋದ್ಯಮ ಮತ್ತು ಸಾರಿಗೆ ಸೇರಿದಂತೆ ಎಲ್ಲಾ ಪ್ರಮುಖ ವಲಯಗಳ ಮೇಲೆ ನೇರ ಪ್ರಭಾವ ಬೀರಲಿದೆ.</p><p><strong>ಆಹಾರ, ಅಗತ್ಯ ವಸ್ತುಗಳ ಬೆಲೆ ಏರಿಕೆ</strong></p><p>ಪೆಟ್ರೋಲ್, ಡೀಸೆಲ್ ಮತ್ತು ಸಿಎನ್ಜಿ ಬೆಲೆಯೂ ಏರಿಕೆಯಾಗಿರುವ ಕಾರಣ ಸರಕು ಸಾಗಣೆ ವೆಚ್ಚ ಹೆಚ್ಚಾಗಲಿದೆ. ಇದರ ನೇರ ಪರಿಣಾಮ ತರಕಾರಿ, ಹಣ್ಣು, ಹಾಲಿನ ಉತ್ಪನ್ನಗಳ ಮೇಲೆ ಬೀರಲಿದ್ದು, ಇವುಗಳ ಬೆಲೆ ಏರಿಕೆಯಾಗಲಿದೆ. ಮುಂದಿನ ದಿನಗಳಲ್ಲಿ ಅಡುಗೆ ಎಣ್ಣೆ ಬೆಲೆಯಲ್ಲೂ ಏರಿಕೆಯಾಗುವ ಸಾಧ್ಯತೆಯಿದೆ.</p><p><strong>ಪ್ರವಾಸೋದ್ಯಮ, ವಾಯುಯಾನ</strong></p><p>ವಿಮಾನ ಇಂಧನ ಬೆಲೆ ಏರಿಕೆಯಿಂದಾಗಿ ವಿಮಾನಯಾನ ಈಗಾಗಲೇ ಸಂಕಷ್ಟದಲ್ಲಿ ಸಿಲುಕಿದೆ. ಇದಕ್ಕೆ ಸಮನಾಗಿ ಜನರ ಪ್ರಯಾಣ ವೆಚ್ಚ ದುಪ್ಪಟ್ಟಾಗಲಿದ್ದು, ಪ್ರವಾಸೋದ್ಯಮಕ್ಕೂ ಪೆಟ್ಟು ಬೀಳಲಿದೆ. </p><p>ಒಲಾ, ಉಬರ್, ರ್ಯಾಪಿಡೋಗಳ ದರ, ಅಷ್ಟೇ ಯಾಕೆ ಕ್ವಿಕ್ ಕಾಮರ್ಸ್ಗಳೂ ತಮ್ಮ ಉತ್ಪನ್ನಗಳ, ಡೆಲಿವರಿ ಚಾರ್ಜ್ಗಳನ್ನು ಏರಿಕೆ ಮಾಡಲಿವೆ.</p><p><strong>ಕೃಷಿ ವಲಯಕ್ಕೂ ಪೆಟ್ಟು</strong></p><p>ಇನ್ನೇನು ಮುಂಗಾರು ಆರಂಭವಾಗಲಿದೆ. ಬಿತ್ತನೆ, ಕಟಾವು ಕಾರ್ಯಕ್ಕಾಗಿ ಹೆಚ್ಚಿನ ರೈತರು ಈಗ ಯಂತ್ರಗಳನ್ನೇ ನಂಬಿಕೊಂಡಿದ್ದಾರೆ. ಈಗ ಇಂಧನಗಳ ಬೆಲೆ ಏರಿಕೆಯಾಗಿರುವುದು ರೈತರ ಕೆಲಸದ ಮೇಲೂ ದೊಡ್ಡ ಹೊಡೆತ ನೀಡಲಿದೆ. </p><p>ರಾಸಯನಿಕ ಗೊಬ್ಬರ, ಯಂತ್ರಗಳ ಬಿಡಿ ಭಾಗಗಳ ಸಾಗಣೆ ವೆಚ್ಚವೂ ಏರುವುದರಿಂದ ಉತ್ಪನ್ನಗಳ ಬೆಲೆಯೂ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.</p><p><strong>ಬೆಲೆ ಏರಿಕೆಯಾಗಿರುವುದೇಕೆ?</strong></p><p>ಯುದ್ಧದ ಕಾರಣದಿಂದ ಕಚ್ಚಾತೈಲದ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ತೈಲ ಕಂಪನಿಗಳು ನಿತ್ಯ ₹1 ಸಾವಿರ ಕೋಟಿಯಷ್ಟು ನಷ್ಟ ಅನುಭವಿಸುತ್ತಿವೆ ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಈ ಹಿಂದೆಯೇ ಹೇಳಿದ್ದರು. </p><p>ಜಾಗತಿಕ ಇಂಧನಗಳ ಬೆಲೆಯಲ್ಲಿ ತೀವ್ರ ಏರಿಕೆಯಾಗಿರುವುದರಿಂದ ದೇಶದಾದ್ಯಂತ ಇಂಧನ ಬೆಲೆ ಪರಿಷ್ಕರಣೆ ಮಾಡಲಾಗಿದೆ ಎಂದು ಕೇಂದ್ರ ಹೇಳಿದೆ.</p>.<p><strong>ಆಧಾರ: ಡೆಕ್ಕನ್ ಹೆರಾಲ್ಡ್, ಮನಿ ಕಂಟ್ರೋಲ್, ಪಿಟಿಐ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇಶದಾದ್ಯಂತ ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ₹3 ಹಾಗೂ ಸಿಎನ್ಜಿ ದರದಲ್ಲಿ ₹2 ಏರಿಕೆಯಾಗಿದ್ದು, ಜನಸಾಮಾನ್ಯರ ಆರ್ಥಿಕ ಸ್ಥಿತಿಯ ಮೇಲೆ ಇದು ಗಂಭೀರ ಪರಿಣಾಮ ಬೀರಲಿದೆ. ಕೇವಲ ವಾಹನ ಸವಾರರಿಗಷ್ಟೇ ಅಲ್ಲದೆ, ಸರಕು ಸಾಗಣೆ ವೆಚ್ಚ ಹೆಚ್ಚಾಗುವುದರಿಂದ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರುವ ಭೀತಿ ಎದುರಾಗಿದೆ. ನಾಲ್ಕು ವರ್ಷಗಳ ನಂತರ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಈ ಕ್ರಮವು ಕೃಷಿ, ಪ್ರವಾಸೋದ್ಯಮ ಮತ್ತು ಸಾರಿಗೆ ಸೇರಿದಂತೆ ಎಲ್ಲಾ ಪ್ರಮುಖ ವಲಯಗಳ ಮೇಲೆ ನೇರ ಪ್ರಭಾವ ಬೀರಲಿದೆ.</p><p><strong>ಆಹಾರ, ಅಗತ್ಯ ವಸ್ತುಗಳ ಬೆಲೆ ಏರಿಕೆ</strong></p><p>ಪೆಟ್ರೋಲ್, ಡೀಸೆಲ್ ಮತ್ತು ಸಿಎನ್ಜಿ ಬೆಲೆಯೂ ಏರಿಕೆಯಾಗಿರುವ ಕಾರಣ ಸರಕು ಸಾಗಣೆ ವೆಚ್ಚ ಹೆಚ್ಚಾಗಲಿದೆ. ಇದರ ನೇರ ಪರಿಣಾಮ ತರಕಾರಿ, ಹಣ್ಣು, ಹಾಲಿನ ಉತ್ಪನ್ನಗಳ ಮೇಲೆ ಬೀರಲಿದ್ದು, ಇವುಗಳ ಬೆಲೆ ಏರಿಕೆಯಾಗಲಿದೆ. ಮುಂದಿನ ದಿನಗಳಲ್ಲಿ ಅಡುಗೆ ಎಣ್ಣೆ ಬೆಲೆಯಲ್ಲೂ ಏರಿಕೆಯಾಗುವ ಸಾಧ್ಯತೆಯಿದೆ.</p><p><strong>ಪ್ರವಾಸೋದ್ಯಮ, ವಾಯುಯಾನ</strong></p><p>ವಿಮಾನ ಇಂಧನ ಬೆಲೆ ಏರಿಕೆಯಿಂದಾಗಿ ವಿಮಾನಯಾನ ಈಗಾಗಲೇ ಸಂಕಷ್ಟದಲ್ಲಿ ಸಿಲುಕಿದೆ. ಇದಕ್ಕೆ ಸಮನಾಗಿ ಜನರ ಪ್ರಯಾಣ ವೆಚ್ಚ ದುಪ್ಪಟ್ಟಾಗಲಿದ್ದು, ಪ್ರವಾಸೋದ್ಯಮಕ್ಕೂ ಪೆಟ್ಟು ಬೀಳಲಿದೆ. </p><p>ಒಲಾ, ಉಬರ್, ರ್ಯಾಪಿಡೋಗಳ ದರ, ಅಷ್ಟೇ ಯಾಕೆ ಕ್ವಿಕ್ ಕಾಮರ್ಸ್ಗಳೂ ತಮ್ಮ ಉತ್ಪನ್ನಗಳ, ಡೆಲಿವರಿ ಚಾರ್ಜ್ಗಳನ್ನು ಏರಿಕೆ ಮಾಡಲಿವೆ.</p><p><strong>ಕೃಷಿ ವಲಯಕ್ಕೂ ಪೆಟ್ಟು</strong></p><p>ಇನ್ನೇನು ಮುಂಗಾರು ಆರಂಭವಾಗಲಿದೆ. ಬಿತ್ತನೆ, ಕಟಾವು ಕಾರ್ಯಕ್ಕಾಗಿ ಹೆಚ್ಚಿನ ರೈತರು ಈಗ ಯಂತ್ರಗಳನ್ನೇ ನಂಬಿಕೊಂಡಿದ್ದಾರೆ. ಈಗ ಇಂಧನಗಳ ಬೆಲೆ ಏರಿಕೆಯಾಗಿರುವುದು ರೈತರ ಕೆಲಸದ ಮೇಲೂ ದೊಡ್ಡ ಹೊಡೆತ ನೀಡಲಿದೆ. </p><p>ರಾಸಯನಿಕ ಗೊಬ್ಬರ, ಯಂತ್ರಗಳ ಬಿಡಿ ಭಾಗಗಳ ಸಾಗಣೆ ವೆಚ್ಚವೂ ಏರುವುದರಿಂದ ಉತ್ಪನ್ನಗಳ ಬೆಲೆಯೂ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.</p><p><strong>ಬೆಲೆ ಏರಿಕೆಯಾಗಿರುವುದೇಕೆ?</strong></p><p>ಯುದ್ಧದ ಕಾರಣದಿಂದ ಕಚ್ಚಾತೈಲದ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ತೈಲ ಕಂಪನಿಗಳು ನಿತ್ಯ ₹1 ಸಾವಿರ ಕೋಟಿಯಷ್ಟು ನಷ್ಟ ಅನುಭವಿಸುತ್ತಿವೆ ಎಂದು ಕೇಂದ್ರ ಇಂಧನ ಸಚಿವ ಹರ್ದೀಪ್ ಸಿಂಗ್ ಪುರಿ ಈ ಹಿಂದೆಯೇ ಹೇಳಿದ್ದರು. </p><p>ಜಾಗತಿಕ ಇಂಧನಗಳ ಬೆಲೆಯಲ್ಲಿ ತೀವ್ರ ಏರಿಕೆಯಾಗಿರುವುದರಿಂದ ದೇಶದಾದ್ಯಂತ ಇಂಧನ ಬೆಲೆ ಪರಿಷ್ಕರಣೆ ಮಾಡಲಾಗಿದೆ ಎಂದು ಕೇಂದ್ರ ಹೇಳಿದೆ.</p>.<p><strong>ಆಧಾರ: ಡೆಕ್ಕನ್ ಹೆರಾಲ್ಡ್, ಮನಿ ಕಂಟ್ರೋಲ್, ಪಿಟಿಐ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>