ಒಂದು ಸಾಲಿನಲ್ಲಿ
ಕರ್ನಾಟಕದ ನೋಂದಾಯಿತ ನಿರ್ಮಾಣ ಕಾರ್ಮಿಕರಿಗಾಗಿ ಸರ್ಕಾರವು ಪಿಂಚಣಿ, ಆರೋಗ್ಯ ಮತ್ತು ಶಿಕ್ಷಣ ಸೇರಿ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಪ್ರಯೋಜನ ಪಡೆಯುವುದು ಅವಶ್ಯಕವಾಗಿದೆ.

19ನೇ ಶತಮಾನದ ಅಂತ್ಯದ ವೇಳೆಗೆ ಅಮೆರಿಕದ ಶಿಕಾಗೋದಲ್ಲಿ ಕಾರ್ಮಿಕರು ದಿನಕ್ಕೆ 8 ಗಂಟೆಗಳ ಕೆಲಸದ ಅವಧಿ ಮಾತ್ರ ಇರಬೇಕೆಂದು ನಡೆಸಿದ ಹೋರಾಟ ಹಾಗೂ ಬಲಿದಾನಗಳ ನೆನಪಿಗಾಗಿ ಮೇ 1ರಂದು ವಿಶ್ವಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತದಲ್ಲಿ 1923ರಲ್ಲಿ ಮೊದಲ ಬಾರಿಗೆ ಕಾರ್ಮಿಕರ ದಿನವನ್ನು ಆಚರಿಸಲಾಯಿತು. ದೇಶದ ಆರ್ಥಿಕತೆಯ ಬೆನ್ನೆಲುಬು ಎಂತಲೇ ಕಾರ್ಮಿಕರನ್ನು ಕರೆಯಲಾಗುತ್ತದೆ. ನಿರಂತರವಾಗಿ ದುಡಿಯುವ ಕಾರ್ಮಿಕರಿಗೆ ಸರ್ಕಾರದಿಂದ ಹಲವು ಸೌಲಭ್ಯಗಳಿವೆ. ರಾಜ್ಯದಲ್ಲಿ ಕಾರ್ಮಿಕರರಿಗಾಗಿಯೇ ಜಾರಿ ಮಾಡಿದ ಪ್ರಮುಖ ಯೋಜನೆಗಳ ಮಾಹಿತಿ ಇಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.