ಅಂಗನವಾಡಿ ಮೂಲಕ, ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ಪೋಷಕಾಂಶಯುಕ್ತ ಆಹಾರ ಪೂರೈಕೆ, ಮಾತೃತ್ವ ವಂದನಾ ಯೋಜನೆ ಮೂಲಕ ಆರ್ಥಿಕ ನೆರವು ಮೊದಲಾದ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಆದರೆ ದೇಶದ ಎಲ್ಲಾ ಭಾಗಗಳಲ್ಲಿ ಈ ಯೋಜನೆ ಏಕಪ್ರಕಾರದಲ್ಲಿ ಅನುಷ್ಠಾನಕ್ಕೆ ಬರುತ್ತಿಲ್ಲ. ಕೆಲವು ರಾಜ್ಯಗಳಲ್ಲಿ ಈ ಯೋಜನೆಗಳ ಫಲಾನುಭವಿಗಳ ಪ್ರಮಾಣ ಗರಿಷ್ಠಮಟ್ಟದಲ್ಲಿ ಇದೆ. ಕೆಲವು ರಾಜ್ಯಗಳಲ್ಲಿ ಕಡಿಮೆ ಮಟ್ಟದಲ್ಲಿ ಇದೆ.