ಭಾರಿ ಏರಿಕೆಯಿಂದ ಕಂಗಾಲಾದ ಗ್ರಾಹಕರು ಸೂರ್ಯಕಾಂತಿ, ಶೇಂಗಾಎಣ್ಣೆ ಬಳಕೆಯನ್ನು ಕಡಿಮೆ ಮಾಡಿ ತಾಳೆಎಣ್ಣೆಯನ್ನು ಬಳಸುತ್ತಿದ್ದಾರೆ. ಹೋಟೆಲ್ಗಳಲ್ಲಿಯೂಕರಿದತಿಂಡಿಗಳ ಬೆಲೆ ಏರಿಕೆ ಮಾಡಲಾಗಿದೆ. ಖಾದ್ಯ ತೈಲದ ಬೆಲೆ ಹೆಚ್ಚಳದ ಕುರಿತು ಪ್ರತಿಕ್ರಿಯಿಸಿದ ಕಿರಾಣಿ ವರ್ತಕರ ಸಂಘದ ಕಲಬುರ್ಗಿ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಮಾದಮಶೆಟ್ಟಿ, ‘ದುಬಾರಿ ಬೆಲೆಯ ಅಡುಗೆ ಎಣ್ಣೆಯನ್ನು ಖರೀದಿಸುವವರ ಪ್ರಮಾಣ ಇಳಿಮುಖವಾಗಿದೆ’ ಎಂದರು.