ಶುಕ್ರವಾರ, 25 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ಒಳನೋಟ: ರಾಜ್ಯ ಏರಿಗೆ– ಕೇಂದ್ರ ನೀರಿಗೆ! ರಾಜ್ಯದ ಯೋಜನೆಗಳಿಗೆ ಸಿಗದ ನೆರವು-ಸಹಕಾರ
ಒಳನೋಟ: ರಾಜ್ಯ ಏರಿಗೆ– ಕೇಂದ್ರ ನೀರಿಗೆ! ರಾಜ್ಯದ ಯೋಜನೆಗಳಿಗೆ ಸಿಗದ ನೆರವು-ಸಹಕಾರ
ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದ ಯೋಜನೆಗಳ ಅನುಮೋದನೆಯ ವಿಚಾರ ತೆಗೆದುಕೊಂಡರೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ನಿರ್ಲಕ್ಷ್ಯ ಧೋರಣೆಯನ್ನು ಅನುಸರಿಸುತ್ತಲೇ ಇದೆ.
ಫಾಲೋ ಮಾಡಿ
Published 30 ಜೂನ್ 2024, 0:25 IST
Last Updated 30 ಜೂನ್ 2024, 0:25 IST
Comments
ಲಕ್ಕವಳ್ಳಿಯ ಭದ್ರಾ ಜಲಾಶಯ

ಲಕ್ಕವಳ್ಳಿಯ ಭದ್ರಾ ಜಲಾಶಯ

(ಸಂಗ್ರಹ ಚಿತ್ರ)

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜಲ ಯೋಜನೆಗಳ ಕುರಿತು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಮಹದಾಯಿ ಯೋಜನೆಗೆ ಅನುಮೋದನೆ ನೀಡಲು ನ್ಯಾಯಾಲಯದಲ್ಲಿ ಪ್ರಕರಣವಿದೆ ಎಂದು ನೆಪ ಹೇಳುತ್ತಿದ್ದಾರೆ. ರಾಜ್ಯಕ್ಕೆ ಸಿಗಬೇಕಿರುವುದು ಪರಿಸರ ಹಾಗೂ ವನ್ಯಜೀವಿ ಅನುಮೋದನೆ. ಅದನ್ನು ಕೊಡಿಸಿದರೆ ಯೋಜನೆಗೆ ಚಾಲನೆ ನೀಡುತ್ತೇವೆ. ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿಲ್ಲ. ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ಕೊಡಬೇಕು. ಈ ಬಗ್ಗೆ ಕೇಂದ್ರ ಸಚಿವರು ಹಾಗೂ ಸಂಸದರಿಗೆ ಮನವರಿಕೆ ಮಾಡಿಕೊಡಲಾಗಿದೆ. ಪಕ್ಷಭೇದ ಮರೆತು ರಾಜ್ಯದ ಪರ ನಿಲ್ಲುವ ಭರವಸೆ ನೀಡಿದ್ದಾರೆ. 
ಸಿದ್ದರಾಮಯ್ಯ, ಮುಖ್ಯಮಂತ್ರಿ
ಸಿದ್ದರಾಮಯ್ಯ, ಮುಖ್ಯಮಂತ್ರಿ

ಸಿದ್ದರಾಮಯ್ಯ, ಮುಖ್ಯಮಂತ್ರಿ

ಅನೇಕ ವಿಷಯಗಳು ಹಾಗೂ ನೀರಾವರಿ ಯೋಜನೆಗಳು ಸುದೀರ್ಘವಾಗಿ ಬಾಕಿ ಇವೆ. ಅವುಗಳ ತ್ವರಿತ ಜಾರಿಗೆ ಎಲ್ಲರೂ ಒಟ್ಟಾಗಿ ಪ್ರಯತ್ನ ಮಾಡಬೇಕು. ಬೆಂಗಳೂರಿಗೆ 15ನೇ ಹಣಕಾಸು ಆಯೋಗ ₹11 ಸಾವಿರ ಕೋಟಿ ಮೀಸಲಿಟ್ಟಿದೆ. ಅದರಲ್ಲಿ ₹6 ಸಾವಿರ ಕೋಟಿ ಬಂದಿಲ್ಲ ಎಂಬುದು ರಾಜ್ಯದ ದೂರು. ಬೆಂಗಳೂರಿನ ಪೆರಿಫೆರಲ್‌ ವರ್ತುಲ ರಸ್ತೆಗೆ ರಾಜ್ಯ ಸರ್ಕಾರ ಮೊದಲು ಹಣ ಮೀಸಲಿಡಬೇಕು. ಬಳಿಕ ಕೇಂದ್ರದ ಬಳಿ ಹಣ ಕೇಳಬೇಕು. ಇದು ₹29 ಸಾವಿರ ಕೋಟಿ ಯೋಜನೆ. ಇದಕ್ಕೆ ರಾಜ್ಯ ಹಣವನ್ನೇ ಮೀಸಲಿಟ್ಟಿಲ್ಲ. ಕೇಂದ್ರ–ರಾಜ್ಯ ಸರ್ಕಾರಗಳ ನಡುವೆ ಬಾಂಧವ್ಯ ಬೇಕು, ಪರಸ್ಪರ ಹೊಂದಾಣಿಕೆ ಬೇಕಿದೆ. ಸಂಘರ್ಷ ಖಂಡಿತಾ ಬೇಡ.
ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ.
ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ.

ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ.

ಮೂರು ದಶಕಗಳಿಂದ ನಿಧಾನಗತಿಯಲ್ಲಿ ಸಾಗುತ್ತಿರುವ 1,264 ಕಿ.ಮೀ. ಉದ್ದದ 9 ರೈಲು ಯೋಜನೆಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮುಂಬರುವ ವರ್ಷಗಳಲ್ಲಿ ಎಲ್ಲ ಬಾಕಿ ರೈಲ್ವೆ ಯೋಜನೆಗಳನ್ನು ವ್ಯವಸ್ಥಿತವಾಗಿ ಪೂರ್ಣಗೊಳಿಸಲಾಗುವುದು. ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಚುರುಕುಗೊಳಿಸಲು ಕೈ ರೈಡ್‌ಗೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ತಾಂತ್ರಿಕ ತಜ್ಞರನ್ನೇ ಶೀಘ್ರ ನೇಮಿಸಲಾಗುತ್ತದೆ. ನೀರಾವರಿ ಯೋಜನೆಗಳಿಗೆ ಶೀಘ್ರ ಅನುಮೋದನೆ ಕೊಡಿಸಲು ಪ್ರಯತ್ನ ಪಡುವೆ.
ವಿ.ಸೋಮಣ್ಣ, ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ 
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಸಂಘರ್ಷದ ಮೂಲಕವೇ ರಾಜ್ಯದ ಪಾಲನ್ನು ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಕೋರ್ಟ್‌ ಮೊರೆ ಹೋಗಿದ್ದರಿಂದ ಬರ ಪರಿಹಾರ ಸಿಕ್ಕಿತು. ಹೊಸ ಸರ್ಕಾರದ ನೆಪವೊಡ್ಡಿ ಅದನ್ನೂ ಬಿಡುಗಡೆ ಮಾಡುವ ಅನುಮಾನ ಇತ್ತು. ಜಿಎಸ್‌ಟಿ ಪಾಲು ಹಂಚಿಕೆ, 15ನೇ ಹಣಕಾಸಿನ ಶಿಫಾರಸಿನ ಜಾರಿಯಲ್ಲಿ ದೊಡ್ಡ ಅನ್ಯಾಯ ಮಾಡಿದೆ. ಕೇಂದ್ರ ಸಚಿವರನ್ನು ಹಲವು ಬಾರಿ ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟರೂ ಫಲ ಶೂನ್ಯ.
ಕೃಷ್ಣ ಬೈರೇಗೌಡ, ಕಂದಾಯ ಸಚಿವ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT