ಮಂಗಳೂರು ತಾಲೂಕಿನ ಬಳ್ಕುಂಜೆಯ ಉದ್ದೇಶಿತ ಭೂಸ್ವಾಧೀನ ಪ್ರದೇಶ
ಪ್ರಜಾವಾಣಿ ಚಿತ್ರ
ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ನಿರ್ಧಾರ ವಿರೋಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದಲ್ಲಿ 500ಕ್ಕೂ ಹೆಚ್ಚು ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು
(ಪ್ರಜಾವಾಣಿ ಸಂಗ್ರಹ ಚಿತ್ರ)
ಕೆಐಎಡಿಬಿ ಜನತೆಯ ಹಿತ ಕಾಯುವ ಸಂಸ್ಥೆಯಾಗಿ ಉಳಿದಿಲ್ಲ. ಭೂ ಮಾಫಿಯಾಗಳ ದಲ್ಲಾಳಿ ಸಂಸ್ಥೆಯಾಗಿ ಮಾರ್ಪಟ್ಟಿದೆ. ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಹೆಸರಿನಲ್ಲಿ ಬೇಕಾಬಿಟ್ಟಿ ಭೂ ಸ್ವಾಧೀನ ನಡೆಸುತ್ತಿದೆಟಿ.ಯಶವಂತ, ರಾಜ್ಯ ಪ್ರಧಾನ ಕಾರ್ಯದರ್ಶಿ, ಕೆಪಿಆರ್ಎಸ್
ಕೆಐಎಡಿಬಿಯು ವ್ಯವಹಾರಕ್ಕಾಗಿ ನಿಂತಿದೆ. ಕಡಿಮೆ ಬೆಲೆಗೆ ಕೊಂಡುಕೊಂಡು ಉದ್ಯಮಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದೆ. ಇದೊಂದು ರೀತಿಯ ರಿಯಲ್ ಎಸ್ಟೇಟ್ ದಂಧೆಯಾಗಿದೆಹೋಳಿಗೆ ಸಿದ್ದಪ್ಪ,ಬಳ್ಳಾರಿ ಜಿಲ್ಲೆ
ಕೆಐಎಡಿಬಿಯು ಕೈಗಾರಿಕೆಗಳ ಅಭಿವೃದ್ಧಿ ಹೆಸರಿನಲ್ಲಿ ರೈತರ ಜಮೀನು ಕಬಳಿಸಲು ಹುನ್ನಾರ ನಡೆಸಿರುವುದು ಸರಿಯಲ್ಲ. ಇದನ್ನು ರೈತರು ಹಾಗೂ ಭೂ ದೇವಿ ಮೇಲಿನ ಶೋಷಣೆ ಎನ್ನಬೇಕಾಗುತ್ತದೆಅ.ನ.ಯಲ್ಲಪ್ಪರೆಡ್ಡಿ, ಪರಿಸರವಾದಿ
ಯಾದಗಿರಿ ಜಿಲ್ಲೆ ಕಡೇಚೂರು– ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಜಮೀನು ಬಳಕೆಯಾಗುತ್ತಿಲ್ಲ. ಇರುವ ಉದ್ಯಮಗಳಲ್ಲಿ ಸ್ಥಳೀಯರಿಗೆ ಉದ್ಯೋಗವೂ ಸಿಕ್ಕಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಖಾನೆಗಳೂ ಬರುತ್ತಿಲ್ಲದಶರಥಮಂತ್ರಿ, ರೈತ, ಶೆಟ್ಟಿಹಳ್ಳಿ, ಯಾದಗಿರಿ ಜಿಲ್ಲೆ
ಬಲವಂತವಾಗಿ ಜಮೀನು ಕಿತ್ತುಕೊಳ್ಳಲು ಬಿಡುವುದಿಲ್ಲ. ಹೋರಾಟ ಮುಂದುವರಿಯಲಿದೆ. ನಮ್ಮ ಜಮೀನು ಉಳಿಸಿಕೊಳ್ಳುತ್ತೇವೆಪ್ರಮೋದ್, ಯುವ ರೈತ ಹೋರಾಟಗಾರ, ಚನ್ನರಾಯಪಟ್ಟಣ
ವಶಪಡಿಸಿಕೊಂಡು ಅಭಿವೃದ್ಧಿ ಪಡಿಸಿರುವ ಪ್ರದೇಶದಲ್ಲಿ ಕೈಗಾರಿಕೆಗಳು ಆರಂಭವಾಗುವಂತೆ ನೋಡಿಕೊಳ್ಳಬೇಕು. ಪೂರ್ಣ ಪ್ರಮಾಣದಲ್ಲಿ ಹಂಚಿಕೆಯಾಗಿ, ಉದ್ಯಮ ಆರಂಭವಾದ ನಂತರ ಹೊಸದಾಗಿ ಭೂ ಸ್ವಾಧೀನ ಮಾಡಬೇಕು.ಸತೀಶ್ ಮಲ್ಲಣ್ಣ, ಭೂ ಸಂತ್ರಸ್ತ, ತುಮಕೂರು
ತುಮಕೂರು ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಮೂರು ಹಂತದಲ್ಲಿ ಅಭಿವೃದ್ಧಿಪಡಿಸಿರುವ ಜಾಗವನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಯಾವುದೂ ಖಾಲಿ ಉಳಿದಿಲ್ಲ. ಮುಂದಿನ ದಿನಗಳಲ್ಲಿ ಕೈಗಾರಿಕೆಗಳು ಆರಂಭವಾಗಲಿವೆಲಕ್ಷ್ಮಿಶ್, ಕೆಐಎಡಿಬಿ ಅಭಿವೃದ್ಧಿ ವಿಭಾಗದ ಅಧಿಕಾರಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.