ಶನಿವಾರ, 20 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಒಳನೋಟ | ಶುಲ್ಕ ಹೆಚ್ಚಳ: ಹಗಲು ದರೋಡೆ

ಶಿಕ್ಷಣ ಸಂಸ್ಥೆಗಳ ಹಣ ದಾಹ; ಪಾಲಕರಿಗೆ ಪೆಡಂಭೂತವಾಗಿ ಕಾಡುತ್ತಿರುವ ‘ಪಿಡುಗು’
Published : 20 ಸೆಪ್ಟೆಂಬರ್ 2025, 20:44 IST
Last Updated : 20 ಸೆಪ್ಟೆಂಬರ್ 2025, 20:44 IST
ಫಾಲೋ ಮಾಡಿ
Comments
ಶಿಕ್ಷಣ ಹಕ್ಕು ಕಾಯ್ದೆಯ ಆಧಾರದಲ್ಲಿ ಕ್ರಿಯಾ ಯೋಜನೆ ರೂಪಿಸಬೇಕು. ಸೆಕ್ಷನ್‌– 34ರ ಪ್ರಕಾರ ಶಾಲಾ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ಮಂಡಳಿ ರಚಿಸಿ ಶಿಕ್ಷಣ ಕಾಯ್ದೆಯ ಅನುಷ್ಠಾನ ಪರಾಮರ್ಶಿಸಬೇಕು.
– ವಿ.ಪಿ.ನಿರಂಜನಾರಾಧ್ಯ, ಶಿಕ್ಷಣ ತಜ್ಞ
ಜೀವನ ನಡೆಸಲೇ ನಾವು ಕಷ್ಟ ಅನುಭವಿಸುತ್ತಿದ್ದೇವೆ. ಆದರೆ, ನಮ್ಮಂತೆ ನಮ್ಮ ಮಕ್ಕಳು ಕಷ್ಟಪಡುವುದು ಬೇಡ ಎಂದು ಖಾಸಗಿ ಶಾಲೆಗೆ ಸೇರಿಸಿದ್ದೇವೆ. ಅಲ್ಲಿ ಒಳ್ಳೆಯ ಫಲಿತಾಂಶ ಪಡೆದವರನ್ನು ನೋಡಿದ್ದೇವೆ. ಅವರಂತೆಯೇ ನಮ್ಮ ಮಕ್ಕಳು ಶಿಕ್ಷಣದಲ್ಲಿ ಸಾಧನೆ ಮಾಡಬೇಕು‌ ಎಂಬ ಆಸೆ ಇದೆ.
– ಶಿವಾನಂದ ಗೊರಜನವರ, ಗೋಕುಲ ನಿವಾಸಿ, ಹುಬ್ಬಳ್ಳಿ
ನಾನು ಕಲಿತದ್ದು ಸರ್ಕಾರಿ ಶಾಲೆಯಲ್ಲೇ. ನನ್ನ ಮಗನನ್ನೂ ಅದೇ ಶಾಲೆಯಲ್ಲಿ ಓದಿಸಬೇಕೆಂದಿದ್ದೆ. ನಾವು ಕಲಿಯುವಾಗ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಶಾಲೆಯಲ್ಲೀಗ 80 ಮಕ್ಕಳಿದ್ದಾರೆ. ಒಂದರಿಂದ ಏಳನೇ ತರಗತಿಗೆ ಇಬ್ಬರೇ ಶಿಕ್ಷಕಿಯರಿದ್ದಾರೆ. ಇಂತಹ ಶಾಲೆಯಲ್ಲಿ ನಮ್ಮ ಮಕ್ಕಳಿಗೆ ಯಾವ ರೀತಿಯ ಶಿಕ್ಷಣ ಸಿಗಲು ಸಾಧ್ಯ. ಹಾಗಾಗಿ ಖಾಸಗಿ ಶಾಲೆಗೆ ಸೇರಿಸಿರುವೆ.
– ದೀಪಕ್ ಬಜಾಲ್‌, ಪಕ್ಕಲಡ್ಕ, ಮಂಗಳೂರು 
ಅಕ್ಕಪಕ್ಕದ ಮನೆಯವರು ತಮ್ಮ ಮಕ್ಕಳನ್ನು ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಿದ್ದಾರೆ. ನಾವು ಮಗನನ್ನು ಸರ್ಕಾರಿ ಶಾಲೆಗೆ ಸೇರಿಸಿದರೆ ಅವರು ಕೀಳಾಗಿ ನೋಡುತ್ತಾರೆ. ಈ ಕಾರಣಕ್ಕೆ ಇದ್ದಿದ್ದರಲ್ಲೇ ಕಡಿಮೆ ಶುಲ್ಕ ಇರುವ ಶಾಲೆಗೆ ಸೇರಿಸಿದ್ದೇವೆ.
– ಪ್ರಕಾಶ್‌ ಕುಮಾರ್‌, ಶಾಮನೂರು ನಿವಾಸಿ, ದಾವಣಗೆರೆ
ಹೈಕೋರ್ಟ್‌ನಲ್ಲಿ ಸರ್ಕಾರಕ್ಕೆ ಹಿನ್ನಡೆ
ಈ ಹಿಂದೆ ಶಿಕ್ಷಣ ಇಲಾಖೆಯು ಕರ್ನಾಟಕ ಶಿಕ್ಷಣ ಕಾಯ್ದೆ–1983ರ ಅನ್ವಯ ಆದೇಶ ಹೊರಡಿಸಿ, ಶುಲ್ಕ ನಿಗದಿ ಸೇರಿದಂತೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಕೆಲ ಚಟುವಟಿಕೆಗಳನ್ನು ನಿಯಂತ್ರಿಸಿತ್ತು. ಇದರಿಂದ ಖಾಸಗಿ ಶಾಲೆಗಳು ಪ್ರತಿ ವರ್ಷ ಶುಲ್ಕ ಹೆಚ್ಚಳ ಮಾಡುವುದಕ್ಕೆ ಕಡಿವಾಣ ಬಿದ್ದಿತ್ತು. ಇದರ ವಿರುದ್ಧ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಎರಡೂವರೆ ದಶಕದ ಹಿಂದೆಯೇ ಹೈಕೋರ್ಟ್‌ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ‘ಸರ್ಕಾರದ ಅನುದಾನ ಪಡೆಯದ ಖಾಸಗಿ ಶಿಕ್ಷಣ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವಂತಿಲ್ಲ’ ಎಂದು ತೀರ್ಪು ನೀಡಿತ್ತು. ಇದರ ವಿರುದ್ಧ ಶಿಕ್ಷಣ ಇಲಾಖೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಸುಪ್ರೀಂಕೋರ್ಟ್ ಸೂಚನೆಯಂತೆ ಮತ್ತೆ ಹೈಕೋರ್ಟ್‌ನಲ್ಲೇ ಮೇಲ್ಮನವಿಯ ವಿಚಾರಣೆ ನಡೆದಿತ್ತು. 2017ರಲ್ಲಿ ಮರು ಆದೇಶ ಹೊರಡಿಸಿದ್ದ ಇಲಾಖೆಯು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಮತ್ತೆ ಹಿಡಿತ ಸಾಧಿಸಿತ್ತು. ಆದರೆ ಹೈಕೋರ್ಟ್‌ ಈ ಎರಡು ಆದೇಶಗಳನ್ನೂ ವಜಾಗೊಳಿಸಿತ್ತು. ‘ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಅನುದಾನ ಪಡೆಯುವುದಿಲ್ಲ. ಮೂಲ ಸೌಕರ್ಯ, ಶಿಕ್ಷಕರಿಗೆ ವೇತನ ಸೇರಿದಂತೆ ಎಲ್ಲ ವೆಚ್ಚವನ್ನೂ ಸಂಸ್ಥೆಗಳೇ ಭರಿಸಬೇಕಿದೆ. ಹಾಗಾಗಿ, ಶುಲ್ಕ ಹೆಚ್ಚಳ ಅನಿವಾರ್ಯ. ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕು ಎನ್ನುವ ಕುರಿತು ಆಯಾ ಸಂಸ್ಥೆಗಳೇ ನಿರ್ಧಾರ ತೆಗೆದುಕೊಳ್ಳುತ್ತವೆ’ ಎಂದು ಕುಸ್ಮಾ ಕಾರ್ಯದರ್ಶಿ ಎ.ಮರಿಯಪ್ಪ ಹೇಳಿದ್ದರು.
ಪರಿಕಲ್ಪನೆ: ಯತೀಶ್‌ ಕುಮಾರ್‌ ಜಿ.ಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT